ಅಂತರ್ ರಾಜ್ಯಗಳಿಗೆ ತೆರಳುವ ವಾಹನಗಳಿಗೆ ಅವಕಾಶ :ಮಾಧುಸ್ವಾಮಿ

ಅಂತರ್ ರಾಜ್ಯಗಳಿಗೆ ತೆರಳುವ ವಾಹನಗಳಿಗೆ ಇಂದಿನಿಂದ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಸಚಿವ ಜೆಸಿ ಮಾಧುಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಸಂಪತ್ತಿನ ಕ್ರೂಢೀಕರಣಕ್ಕೆ ಸಂಬಂಧಿಸಿದಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಕೈಗಾರಿಕೆಗಳನ್ನು ತೆರೆಯುವ ಸಂಬಂಧ ಅನುಮತಿ ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ಸೂಚನೆಯೊಂದು ಬಂದಿದೆ. ಅಂತರ ರಾಜ್ಯಗಳಿಗೆ ವಾಹನಗಳು ತೆರಳಲು ಅವಕಾಶ ಮಾಡಿಕೊಂಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಹೀಗಾಗಿ ರಾಜ್ಯದಿಂದ ಹೊರ ರಾಜ್ಯಗಳಿಗೆ ವಾಹನ ಸವಾರರು ತೆರಳುತ್ತಾರೆ ಎಂದ್ರೇ, ಅದಕ್ಕೆ ಇಂದಿನಿಂದ ಅವಕಾಶ ಮಾಡಿಕೊಡಲಾಗುತ್ತಿದೆ. ಹೊರ ರಾಜ್ಯಗಳಿಗೆ ತೆರಳುತ್ತೇವೆ ಎಂದು ವಾಹನ ಸವಾರರು ಮುಂದೆ ಬಂದ್ರೆ ಅವರಿಗೆ ಅನುಮತಿ ನೀಡಲಾಗುತ್ತದೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಸದ್ಯಕ್ಕೆ ಮದ್ಯ ಮಾರಾಟ ಬೇಡವೇ ಬೇಡ: ಆರ್.ಅಶೋಕ್

Thu Apr 30 , 2020
ರಾಜ್ಯದಲ್ಲಿ ಸದ್ಯಕ್ಕೆ ಮದ್ಯ ಮಾರಾಟ ಬೇಡವೇ ಬೇಡ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ  ಅವರು,  ಸದ್ಯ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಮುಂದುವರೆದಿದೆ. ಈ ಹಂತದಲ್ಲಿ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ, ಬಡವರಿಗೆ, ಕಾರ್ಮಿಕರಿಗೆ ನೀಡುವ ಉಚಿತ ಆಹಾರ ಸಾಮಗ್ರಿಗಳು ಪೋಲಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಸದ್ಯಕ್ಕೆ ಮದ್ಯ ಮಾರಾಟ ಬೇಡವೇ ಬೇಡ.ಸದ್ಯ ದೇಶಾದ್ಯಂತ ಮದ್ಯ ಮಾರಾಟಕ್ಕೆ ಬ್ರೇಕ್ ನೀಡಿದೆ. ಕೇಂದ್ರ ಸರ್ಕಾರ […]

Advertisement

Wordpress Social Share Plugin powered by Ultimatelysocial