ಅಗ್ನಿ ದುರಂತ  ಗುಡಿಸಲುಗಳಿಗೆ ಬೆಂಕಿ

ದೆಹಲಿಯ ತುಘಲಕ್ ಬಾದ್ ಕೊಳಗೇರಿಯಲ್ಲಿ  ಇಂದು ತಡರಾತ್ರಿ  ಭಾರೀ ಪ್ರಮಾಣದ ಅಗ್ನಿ ಅನಾಹುತ ಸಂಭವಿಸಿದೆ. ನಂತರ ಸ್ಲಂ ನಲ್ಲಿ ಬೆಂಕಿ ಕಾಣಿಸಿಕೊಂಡಿತೆಂದು ಕರೆ ಬಂದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿಗಳು ಹಾಗೂ  ೩೦  ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಆಗಲೇ ೧,೦೦೦ ದಿಂದ ೧,೨೦೦ ಗುಡಿಸಲುಗಳಿಗೆ ಬೆಂಕಿ ಹೊತ್ತಿಕೊಂಡಿದ್ದವು ಎಂದು  ಉಪಪೊಲೀಸ್ ಆಯುಕ್ತ ರಾಜೇಂದ್ರ ಪ್ರಸಾದ್ ಮೀನಾ ತಿಳಿಸಿದ್ದಾರೆ. ಬೆಂಕಿ ದುರಂತ ಸಂಭವಿಸಿದ ತಕ್ಷಣ ಗುಡಿಸಲುಗಳಲ್ಲಿ ಮಲಗಿದ್ದವರು ಹೊರಕ್ಕೆ ಓಡಿ ಬಂದಿದ್ದರಿಂದ ಯಾವುದೇ ಸಾವುನೋವುಗಳಾಗಿಲ್ಲ. ಅಪಘಾತದಲ್ಲಿ ಹಾನಿಗೊಳಗಾದ ಆಸ್ತಿಯ ಮೌಲ್ಯವನ್ನು ಅಂದಾಜಿಸಲಾಗಿಲ್ಲ. ಆದರೆ ಈ ಅಪಘಾತಕ್ಕೆ ಕಾರಣಗಳೇನೆಂದು ಇದುವರೆಗೂ ತಿಳಿದುಬಂದಿಲ್ಲವೆಂದು ಪೋಲಿಸ್ ಮೂಲಗಳು ತಿಳಿಸಿವೆ.

Please follow and like us:

Leave a Reply

Your email address will not be published. Required fields are marked *

Next Post

  ಮನೆಗೆ ಸೇರುವ ಮುನ್ನವೇ ವ್ಯಕ್ತಿಯೊಬ್ಬನ ಸಾವು

Tue May 26 , 2020
ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಸಾವುಗಳು ಹೆಚ್ಚುತ್ತಿದ್ದು ಇದೀಗ ಕಲಬುರ್ಗಿಯ ಇಂದಿರಾ ನಗರದ ನಿವಾಸಿ 32 ವರ್ಷದ ‌ವ್ಯಕ್ತಿ ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಬಂದಿದ್ದರಿಂದ 14 ದಿನಗಳ ಕಾಲ ಕ್ವಾರಂಟೈನ್ ಮುಗಿಸಿ ಮನೆಗೆ ಹೋಗುವಂತೆ ಸೂಚಿಸಿತ್ತು. ಆದರೆ ಸಂಬಂಧಿಕರೊಬ್ಬರ ಬೈಕ್ ನಲ್ಲಿ ಮನೆಗೆ ತೆರಳುವಾಗ ಆ ವ್ಯಕ್ತಿ ಅಸ್ವಸ್ಥಗೊಂಡಿದ್ದ ಕೂಡಲೇ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ದುರಾದೃಷ್ಟ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಆಸ್ಪತ್ರೆಯಲ್ಲಿ  ಮೃತಪಟ್ಟಿದ್ದಾನೆ. ಈ ಪ್ರಕರಣಕ್ಕೆ […]

Advertisement

Wordpress Social Share Plugin powered by Ultimatelysocial