ಅಸ್ಸಾ0 ಭೀಕರ ಪ್ರವಾಹದಲ್ಲಿ ೧೦೦ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಅಪಾರ ಮೌಲ್ಯದ ಆಸ್ತಿ ಪಾಸ್ತಿ ಉಂಟಾಗಿದ್ದು, ಅಗತ್ಯ ಬಿದ್ದರೆ ಭಾರತ ಸರ್ಕಾರಕ್ಕೆ ನೆರವು ನೀಡಲು ಸಿದ್ಧವಿರುವುದಾಗಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ವಕ್ತಾರರೊಬ್ಬರು ತಿಳಿಸಿದ್ದಾರೆ. ಅಸ್ಸಾಂನಲ್ಲಿ ಭೀಕರ ಪ್ರವಾಹದಿಂದಾಗಿ ಸುಮಾರು ೪ ಮಿಲಿಯನ್ ನಷ್ಟು ಜನರು ಸ್ಥಳಾಂತರವಾಗಿರುವ ಬಗ್ಗೆ ಸಹೋದ್ಯೋಗಿಗಳು ತಿಳಿಸಿದ್ದು, ಅಗತ್ಯವಿದ್ದರೆ ಭಾರತ ಸರ್ಕಾರಕ್ಕೆ ನೆರವು ನೀಡುವಾದಿಗ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ವಕ್ತಾರ ಡುಜಾರಿಕ್ ಹೇಳಿದ್ದಾರೆ.ಅಸ್ಸಾಂನ ೨೪ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿದ್ದು, ಸುಮಾರು ೨೪. ೩ ಲಕ್ಷ ಜನರ ಮೇಲೆ ತೀವ್ರ ರೀತಿಯ ಪರಿಣಾಮ ಉಂಟಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಭೂಕುಸಿತದಿಂದ ೨೬ ಹಾಗೂ ಪ್ರವಾಹ ಸಂಬ0ಧಿತ ಹಾನಿಯಿಂದಾಗಿ ೮೫ ಜನರು ಮೃತಪಟ್ಟಿರುವುದಾಗಿ ಮಾಹಿತಿ ನೀಡಿದೆ.
ಅಸ್ಸಾಂನಲ್ಲಿ ಭೀಕರ ಪ್ರವಾಹ
![](https://speednewskannada.com/wp-content/uploads/2020/07/0.43229900_1595054679_assam-floods.jpg)
Please follow and like us: