ಆನ್ ಲೈನ್ ಶಿಕ್ಷಣ ಒಂದು ಗೀಳಾಗಿದೆ

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಆನ್ ಲೈನ್ ಶಿಕ್ಷಣ ಇದೀಗ ಒಂದು ಗೀಳಾಗಿದೆ. ಮಕ್ಕಳ ಆನ್ ಲೈನ್ ಶಿಕ್ಷಣಕ್ಕೆ ವಿರೋಧವಿದೆ. ಹೀಗಿದ್ದೂ ಜೂನ್ 8ರ ಸೋಮವಾರ ಆನ್ ಲೈನ್ ಶಿಕ್ಷಣದ ಬಗ್ಗೆ ಸಭೆ ನಡೆಸಿ ಚರ್ಚೆ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ಮಹತ್ವದ ನಿರ್ಧಾರ ಜೂನ್ 8ರಂದು ಆನ್ ಲೈನ್ ಶಿಕ್ಷಣದ ಬಗ್ಗೆ ಹೊರ ಬರಲಿದೆ. ರಾಜ್ಯದಲ್ಲಿ ಶಾಲೆಗಳು ಯಾವಾಗ ತೆರೆಯಲಿದೆ ಎಂಬುದೇ ಗೊಂದಲದ ಗೂಡಾಗಿದೆ. ಈ ನಡುವೆ ಆನ್ ಲೈನ್ ಮೂಲಕ ಅನೇಕ ಶಾಲಾ-ಕಾಲೇಜುಗಳು ಮಕ್ಕಳಿಗೆ ತರಗತಿ ಆರಂಭಿಸಿದ್ದವು. ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡ್ತಾ ಇದ್ದವು. ಆದ್ರೇ ಇದನ್ನೇ ಗೀಳಾಗಿಸಿಕೊಂಡು ತರಗತಿ ಆರಂಭಿಸಬಾರದೇಕೆ ಎಂಬ ನಿಲುವನ್ನು ಅನೇಕ ಶಾಲೆಗಳು ತಾಳಿದ್ದವು. ಆದ್ರೇ ಆನ್ ಲೈನ್ ಶಿಕ್ಷಣದ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಬೇಕು ಎನ್ನುವ ಬಗ್ಗೆ ಜೂನ್ 8ರಂದು ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

  ಮಳೆ ಮುನ್ಸೂಚನೆ ನೀಡುವ ಮೊಬೈಲ್ ಆ್ಯಪ್

Sat Jun 6 , 2020
ಯಲಹಂಕದ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕಂದಾಯ ಸಚಿವ  ಆರ್. ಅಶೋಕ,  ಕಂದಾಯ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿಂದು ಏರ್ಪಡಿಸಿದ್ದ ನಗರ ಪ್ರದೇಶ ಪ್ರವಾಹ ನಿರ್ವಹಣೆ ಸನ್ನದ್ಧತೆ ಕಾರ್ಯಾಗಾರವನ್ನು ಉದ್ಘಾಟಿಸಿ, ಇತ್ತೀಚಿನ ವರ್ಷಗಳಲ್ಲಿ ಪ್ರಪಂಚದಾದ್ಯಂತ ನೈಸರ್ಗಿಕ ವಿಕೋಪಗಳು ಪದೇ ಪದೇ  ಸಂಭವಿಸುತ್ತಿದ್ದು, ಈ ನೈಸರ್ಗಿಕ ವಿಕೋಪಗಳಲ್ಲಿ ನಗರ ಪ್ರವಾಹವೂ ಒಂದು. ತೀವ್ರತರ ಭೂ ಬಳಕೆಯಿಂದಾಗಿ ಪ್ರಮುಖ ನಗರ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಪ್ರತಿ  ಮಳೆಗಾಲದಲ್ಲೂ ಮರುಕಳಿಸುತ್ತಿರುವುದನ್ನು […]

Advertisement

Wordpress Social Share Plugin powered by Ultimatelysocial