ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ನಿಯಂತ್ರಿಸುವ ಉದ್ದೇಶದಿಂದ ತಮಿಳುನಾಡು ಸಿಎಂ ಇಕೆ ಪಳನಿಸ್ವಾಮಿ ಅವರು ಚೆನ್ನೈ, ಕೊಯಮತ್ತೂರು, ಮದುರೈ, ಸೇಲಂ ಮತ್ತು ತಿರುಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ. ಏಪ್ರಿಲ್ ೨೬ರ ಬೆಳಗ್ಗೆ ೬ ಗಂಟೆಯಿಂದ ಏಪ್ರಿಲ್ ೨೯ ರ ರಾತ್ರಿ ೯ ಗಂಟೆಯವರೆಗೆ ಈ ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಲಿದೆ. ಈ ಪ್ರದೇಶದಲ್ಲಿ ಕೆಲವು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಪಳನಿಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸ್ಪತ್ರೆ, ಮೆಡಿಕಲ್ ಶಾಪ್, ಪ್ರಯೋಗಾಲಗಳು ಮತ್ತು ಅಂಬುಲೆನ್ಸ್ ಸೇವೆ ಲಭ್ಯವಿರಲಿದೆ ಎಂದು ಹೇಳಿದ್ದಾರೆ.
ಐದು ಮಹಾನಗರಗಳಲ್ಲಿ ಸಂಪೂರ್ಣ ಲಾಕ್ ಡೌನ್
Please follow and like us: