ಬೆಂಗಳೂರು.ಏ.21 : ಕಲಬುರಗಿಯಲ್ಲಿ ಬಲಿಯಾದ 80 ವರ್ಷದ ವೃದ್ಧನಿಗೆ ಮಾರಕ ಕೊರೊನಾ ಸೋಂಕು ತಗುಲಿದ್ದು ಖಚಿತವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮುಖಾಂತರ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಲಬುರ್ಗಿಯಲ್ಲಿ ನಿನ್ನೆ ಬೆಳಗ್ಗೆ ಸಾವನ್ನಪ್ಪಿದ 80 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಕಳೆದ 3 ವರ್ಷಗಳಿಂದ ಈ ವ್ಯಕ್ತಿ ಪಾರ್ಕಿನ್ಸನ್ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಿದರು.