ಕಡಿಮೆ ಬೆಲೆಗೆ ಬಿತ್ತನೆ ಬೀಜ ಸಿಗುತ್ತದೆ ಎಂಬ ಆಸೆಗೆ ಬಿದ್ದು ರೈತರು ಕಳಪೆ ಬೀಜಗಳನ್ನು ಖರೀದಿಸಬಾರದು. ಇದು ಆತ್ಮಹತ್ಯೆಗೆ ಸಮಾನ ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,’ಇನ್ನೇನು ಮುಂಗಾರು ಪ್ರಾರಂಭವಾಗುತ್ತಿದೆ. ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ ವಿತರಿಸಲು ತಯಾರಿ ಮಾಡಿಕೊಳ್ಳುತ್ತಿದ್ದೇವೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಎಲ್ಲವೂ ಸಿಗಲಿವೆ’. ‘ಸರ್ಕಾರ ನಿಗದಿಮಾಡಿರುವ ದರದಲ್ಲೇ ಕೃಷಿ ಉತ್ಪನ್ನಗಳ ಮಾರಾಟ ನಡೆಯಬೇಕು. ಪ್ರತಿ ಉತ್ಪನ್ನಗಳ ದರ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರದಲ್ಲಿ ಹಾಕಬೇಕು. ಇದನ್ನು ಮೀರಿದರೆ ದೂರು ನೀಡಿ. ತಕ್ಷಣ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.