ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಾಜ್ಯದ ಕಾರ್ಮಿಕರಿಗೆ ತಲಾ ೧೦ ಸಾವಿರ ರೂ. ಪರಿಹಾರ ನೀಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ. ಎ.ಎಸ್.ಓಕ ಮತ್ತು ನ್ಯಾ. ಶಿವಶಂಕರ್ ಅಮರಣ್ಣನವರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಅರ್ಜಿದಾರರ ಪರ ವಕೀಲರ ವಾದ ಆಲಿಸಿ ಅರ್ಜಿಯ ಮತ್ತೊಂದು ಪ್ರತಿಯನ್ನು ಸರ್ಕಾರದ ಪರ ವಕೀಲರಿಗೆ ತಲುಪಿಸಲು ಸೂಚಿಸಿ ವಿಚಾರಣೆ ಮುಂದೂಡಿದೆ. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ೧೫ ದಿನಗಳಲ್ಲಿ ೧೦ ಸಾವಿರ ರೂ. ಜಮೆ ಮಾಡಬೇಕು ಹಾಗೂ ಅಸಂಘಟಿತ ಕಾರ್ಮಿಕರಿಗೆ ಪೂರಕವಾಗಿ ಪುನವರ್ಸತಿ ನಿಧಿ ಸ್ಥಾಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಕಾರ್ಮಿಕರಿಗೆ ೧೦ ಸಾವಿರ ಪರಿಹಾರ ನೀಡುವಂತೆ ಹೈಕೋರ್ಟ್ಗೆ ಅರ್ಜಿ
Please follow and like us: