ಕೃಷ್ಣಾ ನದಿ ಇಡೀ ಉತ್ತರ ಕರ್ನಾಟಕದ ಜೀವನದಿ. ಈ ನೀರಿನ ಸದ್ಭಳಕೆಗಿರುವ ಕಾನೂನು ತೊಡಕುಗಳನ್ನು ನಿವಾರಣೆ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಆಲಮಟ್ಟಿ ಜಲಾಶಯವನ್ನು 519.6 ಮೀ. ನಿಂದ 524.256 ಮೀ. ವರೆಗೆ ಹಂತ ಹಂತವಾಗಿ ಏರಿಸಬೇಕೆನ್ನುವ ಪ್ರಸ್ತಾಪ ಸರ್ಕಾರದ ಮುಂದಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ಕೋರಿಕೆ ಸಲ್ಲಿಸಲು ಚಿಂತನೆ ನಡೆದಿದೆ ಎಂದು ಹೇಳಿದರು.
Please follow and like us:
Thu Apr 30 , 2020
ಬೆಂಗಳೂರು: ಕೊರೊನಾ ಸೋಂಕು ಭಯದ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಅನುಮಾನಾಸ್ಪದ ವಸ್ತು ಕಂಡು ಬಂದಿದೆ, ಕೆಲ ಸಮಯ ಭಯ ಪಡುವ ವಾತಾವಾರಣ ನಿರ್ಮಾಣವಾಗಿತ್ತು. ಪಟಾಕಿ ಮಾದರಿಯ ವಸ್ತು ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕತ್ರಿಗುಪ್ಪೆ-ಅಶೋಕನಗರ ಜಂಕ್ಷನ್ ಬಳಿ ಪತ್ತೆಯಾಗಿದೆ. ಅದನ್ನು ಕಂಡು ಭಯಭೀತರಾದ ಜನ ಸ್ಫೋಟಕ ವಸ್ತು ಎಂದು ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಹನುಮಂತನಗರ ಠಾಣಾ ಪೊಲೀಸರು ಹಾಗೂ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ […]