ಲಾಕ್ಡೌನ್ನಂತಹ ಸಮಯದಲ್ಲಿ ಕೆಲಸ ಇಲ್ಲದವರಿಗೆ ನಿರುದ್ಯೋಗ ಭತ್ಯೆ ನೀಡಬೇಕು ಎಂದು ಕಾಯ್ದೆಯಲ್ಲಿದೆ. ಆದ್ರೆ ಗ್ರಾಮೀಣಾಭಿವೃದ್ಧಿ ಸಚಿವರು ಮಾತ್ರ ಕೆಲಸ ಇಲ್ಲದವರಿಗೆ ಪಂಚಾಯಿತಿಗೆ ಹೋಗಿ ಅರ್ಜಿ ಕೊಟ್ಟು ಕೆಲಸ ತೆಗೆದುಕೊಳ್ಳಿ ಎಂದು ಹೇಳುತ್ತಿದ್ದಾರೆ. ಇದು ಎಷ್ಟು ಸರಿ ಎಂದು ಸಂಸದ ಡಿ.ಕೆ.ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಇದು ಪ್ರಪಂಚದಲ್ಲೇ ಉದ್ಭವವಾಗಿರೋ ವಿಭಿನ್ನವಾದ ಸಮಸ್ಯೆ. ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗ ಭತ್ಯೆ ನೀಡಬಹುದು. ಕನಿಷ್ಠ 8 ಸಾವಿರ ರೂ.ಗಳನ್ನು ಪ್ರತಿ ಕುಟುಂಬಕ್ಕೆ ತಿಂಗಳಿಗೆ ನೀಡಲು ಅವಕಾಶವಿದೆ. ಪ್ರತಿ ಕುಟುಂಬಕ್ಕೆ ತಿಂಗಳಿಗೆ 500 ರೂ. ನೀಡಲಾಗುತ್ತಿದೆ. ಇದು ಒಂದು ಕುಟುಂಬ ನಿರ್ವಹಣೆಗೆ ಸಾಕಾಗುವುದೇ ಎಂದು ಪ್ರಶ್ನಿಸಿದರು. ಕೊರೊನಾ ಸೋಂಕಿನ ವಿಷಯದಲ್ಲಿ ತುಮಕೂರು ಜಿಲ್ಲೆ ಆರೆಂಜ್ ಝೋನ್ನಲ್ಲಿದೆ. ಒಂದು ತಾಲೂಕಿನಿಂದ ಮತ್ತೊಂದು ತಾಲೂಕಿಗೆ ಹೋಗದಂತೆ ನೋಡಿಕೊಳ್ಳಬೇಕು. ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕಿದೆ. ಒಬ್ಬ ವ್ಯಕ್ತಿಯಿಂದ ಹೇಗೆ ರೋಗ ಹರಡುತ್ತಿದೆ ಎಂಬುದಕ್ಕೆ ಪಾದರಾಯನಪುರ ಸೇರಿದಂತೆ ಹಲವು ಉದಾಹರಣೆಗಳಿವೆ. 14, 28 ಅಲ್ಲ 31ನೇ ದಿನಕ್ಕೆ ಕೊರೊನಾ ಸೋಂಕು ಮನುಷ್ಯನಲ್ಲಿ ಪತ್ತೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕೆಲಸ ಇಲ್ಲದವರಿಗೆ ನಿರುದ್ಯೋಗ ಭತ್ಯೆ ನೀಡಬೇಕು
Please follow and like us: