ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಕಷ್ಟು ಹಣದ ಅವಶ್ಯಕತೆ ಇದೆ ಎಂದು ಸರ್ಕಾರಿ ನೌಕರರ ಡಿಎ ಏರಿಕೆಯನ್ನು ಏಕಾಏಕಿ ನಿಲ್ಲಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮುಂದುವರಿಸಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಲೆಟ್ ಟ್ರೈನ್ ಪ್ರಾಜೆಕ್ಟ್ ನಿಲ್ಲಿಸುವ ಬದಲು ಸರ್ಕಾರಿ ನೌಕರರಿಗೆ ನೀಡುವ ಡಿಎಯನ್ನು ನಿಲ್ಲಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಇನ್ನೂ ಇವತ್ತು ಈ ಸಂಬಂಧ ಕಾಂಗ್ರೆಸ್ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದು, ಅದರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ರಾಹುಲ್ ಗಾಂಧಿ, ಪಿ.ಚಿದಂಬರಂ ಮೋದಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ. ಇನ್ನೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂತಹ ಕ್ರಮದ ಅಗತ್ಯವಿರಲಿಲ್ಲ. ಡಿಎ ಕಡಿತಗೊಂಡ ನೌಕರರ ಪರವಾಗಿ ನಾವು ನಿಲ್ಲಬೇಕಿದೆ ಎಂದಿದ್ದಾರೆ. ಈ ಪರಿಸ್ಥಿತಿಯಲ್ಲಿ ಸರ್ಕಾರಿ ನೌಕರರ ಮೇಲೆ ಇನ್ನೊಂದಿಷ್ಟು ಕಷ್ಟವನ್ನು ಹೇರುವುದು ಅಗತ್ಯವಾಗಿರಲಿಲ್ಲವೆಂದು ಅಭಿಪ್ರಾಯ ಪಟ್ಟಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಇಂಗ್ಲೆಂಡ್ನಿಂದ ಕೇರಳಕ್ಕೆ ರೋಗಿಯ ಏರ್ಲಿಫ್ಟ್

Sat Apr 25 , 2020
ತಿರುವನಂತಪುರಂ: ತೀವ್ರ ಅನಾರೋಗ್ಯಕ್ಕೀಡಾಗಿದ್ದ ವ್ಯಕ್ತಿಯನ್ನ ಇಂಗ್ಲೆಂಡ್‌ನಿಂದ ಏರ್‌ಲಿಫ್ಟ್ ಮಾಡಿ ಕೇರಳಕ್ಕೆ ಕರೆತರುವಲ್ಲಿ ವಾಟ್ಸ್ಯಾಪ್ ಗ್ರೂಪ್‌ವೊಂದು ನೆರವಾಗಿದೆ. ಕೊರೊನಾದಿಂದ ಭಾರತದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದಿದ್ದರಿಂದ  ಈ ವಾಟ್ಸ್ಯಾಪ್ ಗ್ರೂಪ್‌ನ ಸಹಾಯದಿಂದ ರೋಗಿಯೊಬ್ರು ದೇಶಕ್ಕೆ ವಾಪಸ್ ಆಗಲು ಅನುಕೂಲವಾಗಿದೆ. ಕೇರಳಿಗರನ್ನೊಳಗೊಂಡ ದೆಹಲಿ ಮೂಲದ ಈ ವಾಟ್ಸ್ಆ್ಯಪ್ ಗ್ರೂಪ್‌ನಲ್ಲಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಹಾಗೂ ಮಾಜಿ ಕೇಂದ್ರ ಸಚಿವ ಕೆ.ಜೆ ಅಲ್ಫೋನ್ಸ್ ಕೂಡ ಇದ್ದರು. ೫೦ ದಿನಗಳ ಹಿಂದೆ ಡಿಸ್ಟ್ರೆಸ್ ಮ್ಯಾನೇಜ್ಮೆಂಟ್ ಕಲೆಕ್ಟಿವ್ […]

Advertisement

Wordpress Social Share Plugin powered by Ultimatelysocial