ಕೊನೆಗೂ ನಿಟ್ಟುಸಿರು ಬಿಟ್ಟ ಕೊಪ್ಪಳ ಜನತೆ..!

ಬಾಗಲಕೋಟೆಯಲ್ಲಿ ನಡೆದಿದ್ದ ಒಂದು ಮದುವೆ ಗದಗ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಕೊರೋನಾ ಹರಡುವ ಭೀತಿಗೆ ಕಾರಣವಾಗಿತ್ತು. ಏಕೆಂದರೆ ಈ ಮದುವೆಯಲ್ಲಿ ಪಾಲ್ಗೊಂಡಿದ್ದ ಕೆಲವರಲ್ಲಿ ಕೊರೋನಾ ಸೋಂಕು ಕಂಡುಬಂದಿತ್ತು. ಅಲ್ಲದೆ, ಇವರ ಟ್ರಾವೆಲ್‌ ಹಿಸ್ಟರಿಯನ್ನು ಕೆದಕಿದಾಗ  ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್, ಹನುಮನಾಳದ ವರೆಗೆ ವಿಸ್ತರಿಸಿತ್ತು. ಈ ವಿಚಾರ ಸಾಮಾನ್ಯವಾಗಿ ಇಡೀ ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿತ್ತು. ಹೀಗಾಗಿ ಕೊಪ್ಪಳ ಜಿಲ್ಲೆಯಲ್ಲಿ ನಿಲೊಗಲ್ ಗ್ರಾಮದ 18 ಜನರನ್ನು ಮೇ 7ರಂದು ಕ್ವಾರಂಟೈನ್ ಮಾಡಲಾಗಿತ್ತು. ಇವರೆಲ್ಲ ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯೊಬ್ಬನ ಮಗಳ ಮದುವೆಯಲ್ಲಿ ಪಾಲ್ಗೊಂಡಿದ್ದರು. ಇದಲ್ಲದೆ, ಕೊಪ್ಪಳ ಜಿಲ್ಲೆಯಲ್ಲಿ 154 ಜನರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 118 ಜನರ ವರದಿ ನೆಗೆಟಿವ್ ಬಂದಿದೆ. ಅಲ್ಲದೆ, ಕೊಪ್ಪಳ ಜಿಲ್ಲೆಯ ಕೇವಲ 36 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಮಾತ್ರ ಬಾಕಿ ಇದ್ದು, ಇಡೀ ಜಿಲ್ಲೆ ಕೊನೆಗೂ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ವರದಿ:  ವೆಬ್ ಡೆಸ್ಕ್ ಸ್ಪೀಡ್ ನ್ಯೂಸ್ ಕನ್ನಡ

Please follow and like us:

Leave a Reply

Your email address will not be published. Required fields are marked *

Next Post

 45 ಚೀನೀ ಪ್ರಜೆಗಳು ಮನೆಗೆ ಹೋಗಲು  ಪರದಾಟ

Sun May 10 , 2020
ಕರೋನವೈರಸ್ ನಿರ್ಬಂಧದಿಂದಾಗಿ ನೇಪಾಳದಲ್ಲಿ ಸಿಲುಕಿರುವ ಚೀನಾದ ಪ್ರಜೆಗಳ ಗುಂಪು ಕಠ್ಮಂಡುವಿನಲ್ಲಿರುವ ಪ್ರಧಾನ ಮಂತ್ರಿ ಕಚೇರಿಯನ್ನು ತಲುಪುವ ಪ್ರಯತ್ನದಲ್ಲಿ ಪೊಲೀಸರೊಂದಿಗೆ ಘರ್ಷಣೆ ನಡೆಸಿತು. ಅವರಲ್ಲಿ 45 ಜನರನ್ನು ಬಂಧಿಸಲಾಗಿದೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ.  “ಪ್ರತಿಭಟನಾಕಾರರು ನಿಷೇಧಿತ ವಲಯಕ್ಕೆ ಪ್ರವೇಶಿಸಿದಾಗ ಘರ್ಷಣೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಹರಿಬಹಾದೂರ್ ಬಾಸ್ನೆಟ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ” ಎಂದು ನೇಪಾಳ ಪೊಲೀಸ್ ವರಿಷ್ಠಾಧಿಕಾರಿ ಸೋಮಂದ್ರ ಸಿಂಗ್ ರಾಥೋಡ್ ದೂರವಾಣಿ ಮೂಲಕ ಎಎನ್‌ಐಗೆ ತಿಳಿಸಿದ್ದಾರೆ. […]

Advertisement

Wordpress Social Share Plugin powered by Ultimatelysocial