ಕೊರೊನಾ ಟೆಸ್ಟ್ ರಿಸಲ್ಟ್ ಬರುವ ಸಾಧ್ಯತೆ- ಪೊಲೀಸರಲ್ಲಿ ಆತಂಕ

ಬೆಂಗಳೂರು: ಪಾದರಾಯನಪುರದಲ್ಲಿ‌ ಗಲಭೆ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರ ಕೊರೊನಾ ತಪಾಸಣೆಯ ಫಲಿತಾಂಶ ಇಂದು ಕೈ ಸೇರುವ ಸಾಧ್ಯತೆ ಇದೆ. ಪೊಲೀಸ್ ಸಿಬ್ಬಂದಿ, ಗಲಾಟೆ ಪ್ರಕರಣ ಆರೋಪಿಗಳ ಪತ್ತೆ ಕರ್ತವ್ಯದಲ್ಲಿ ತೊಡಗಿದ್ದರು.  ಬಂಧನದ ಬಳಿಕ ರಾಮನಗರ ಜೈಲಿನಲ್ಲಿ ಇರಿಸಿದ್ದ ವೇಳೆ ಐವರು ಆರೋಪಿಗಳಲ್ಲಿ ಸೋಂಕು ಇರೋದು ದೃಢಪಟ್ಟಿತ್ತು. ಹೀಗಾಗಿ ಕಿಡಿಗೇಡಿಗಳ ಪತ್ತೆಗೆ ಶ್ರಮಿಸಿದ್ದ ಪಶ್ಚಿಮ, ಕೇಂದ್ರ, ಉತ್ತರ ವಿಭಾಗ ಹಾಗೂ ಸಿಸಿಬಿ ಪೊಲೀಸರನ್ನ ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ೧೮೬ ಪೊಲೀಸರಿಗೆ ತಪಾಸಣೆ ಮಾಡಲಾಗಿತ್ತು. ೧೫೦ಕ್ಕು ಹೆಚ್ಚು ಸಿಬ್ಬಂದಿಯ ಮಾದರಿ ಸಂಗ್ರಹ ಮಾಡಲಾಗಿತ್ತು. ಅದರ ರಿರ್ಪೋಟ್ ಇಂದು ಕೈ ಸೇರುವ ನಿರೀಕ್ಷೆ ಇದೆ. ಸದ್ಯ ಪೊಲೀಸರಲ್ಲಿ ಆತಂಕ ಶುರುವಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

512ಕ್ಕೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ

Mon Apr 27 , 2020
ರಾಜ್ಯದಲ್ಲಿ ಇಂದು ಹೊಸದಾಗಿ 9 ಕೊರೋನಾ ವೈರಸ್ ಕೇಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೊರೋನಾ ಸೋಂಕಿನ ಪ್ರಕರಣ ಸಂಬಂಧ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ,ಹೊಸದಾಗಿ ದಾಖಲಾದ ಸೋಂಕಿತರ ಪೈಕಿ ಬೆಂಗಳೂರು ನಗರದಲ್ಲಿ ಒಬ್ಬರಿಗೆ, ಮಂಡ್ಯದಲ್ಲಿ ಇಬ್ಬರಿಗೆ, ದಕ್ಷಿಣಕನ್ನಡದಲ್ಲಿ ಇಬ್ಬರಿಗೆ ಬಾಗಲಕೋಟೆಯಲ್ಲಿ ಇಬ್ಬರಿಗೆ ಮತ್ತು ವಿಜಯಪುರದಲ್ಲಿ ಇಬ್ಬರಿಗೆ ಕೊರೋನಾ ಸೋಂಕು ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ […]

Advertisement

Wordpress Social Share Plugin powered by Ultimatelysocial