ನವದೆಹಲಿ: ಲಾಕ್ಡೌನ್ ಮುಕ್ತಾಯಗೊಂಡ ನಂತರವೇ ಕ್ರೀಡಾ ಚಟುವಟಿಕೆಗಳನ್ನು ಮತ್ತೆ ಪುನರ್ ಆರಂಭಿಸುವ ಬಗ್ಗೆ ಎಲ್ಲ ಕ್ರೀಡಾಪಟುಗಳು ನಿರೀಕ್ಷೆಯಲ್ಲಿದ್ದಾರೆ. ಆದರೆ ಭಾರತದಲ್ಲಿ ಈ ರೀತಿ ಕ್ರೀಡಾ ಚಟುವಟಿಕೆಗಳನ್ನು ಏಕಾಏಕಿ ಪುನರಾರಂಭ ಮಾಡುವುದು ಸರಿಯಲ್ಲ. ಸದ್ಯ ಭಾರತದಲ್ಲಿ ಯಾವುದೇ ಕ್ರಿಕೆಟ್ ಪಂದ್ಯಗಳನ್ನು ನಿರೀಕ್ಷಿಸಬೇಡಿ ಎಂದು ಬಿಸಿಸಿಐ ಅಧ್ಯಕ್ಷ ಸೌರವ ಗಂಗೂಲಿ ಹೇಳಿದ್ದಾರೆ. ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ ಕೂಡ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಿದೆ.
ಮಾನವನ ಜೀವನವೇ ಅಪಾಯದಲ್ಲಿರುವಾಗ ಕ್ರೀಡೆಯ ಬಗ್ಗೆ ಚಿಂತಿಸುವುದು ಸರಿಯಲ್ಲ. ಎಂದು ಗಂಗೂಲಿ ಹೇಳಿದ್ದಾರೆ. ಈ ಮೂಲಕ ಭಾರತ ಮಾತ್ರವಲ್ಲದೆ ವಿಶ್ವದ ಯಾವುದೇ ಮೂಲೆಯಲ್ಲಿ ಮುಂದಿನ ಕೆಲ ತಿಂಗಳ ಮಟ್ಟಿಗೆ ಐಪಿಎಲ್ ಟೂರ್ನಿ ಆಯೋಜಿಸುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೊರೊನಾ ನಿಲ್ಲದೆ ಪಂದ್ಯ ನಡೆಯಲ್ಲ: ದಾದಾ
Please follow and like us: