ಕೊರೊನಾ ನಿಲ್ಲದೆ ಪಂದ್ಯ ನಡೆಯಲ್ಲ: ದಾದಾ

ನವದೆಹಲಿ: ಲಾಕ್‌ಡೌನ್ ಮುಕ್ತಾಯಗೊಂಡ ನಂತರವೇ ಕ್ರೀಡಾ ಚಟುವಟಿಕೆಗಳನ್ನು ಮತ್ತೆ ಪುನರ್ ಆರಂಭಿಸುವ ಬಗ್ಗೆ ಎಲ್ಲ ಕ್ರೀಡಾಪಟುಗಳು ನಿರೀಕ್ಷೆಯಲ್ಲಿದ್ದಾರೆ. ಆದರೆ ಭಾರತದಲ್ಲಿ ಈ ರೀತಿ ಕ್ರೀಡಾ ಚಟುವಟಿಕೆಗಳನ್ನು ಏಕಾಏಕಿ ಪುನರಾರಂಭ ಮಾಡುವುದು ಸರಿಯಲ್ಲ. ಸದ್ಯ ಭಾರತದಲ್ಲಿ ಯಾವುದೇ ಕ್ರಿಕೆಟ್ ಪಂದ್ಯಗಳನ್ನು ನಿರೀಕ್ಷಿಸಬೇಡಿ ಎಂದು ಬಿಸಿಸಿಐ ಅಧ್ಯಕ್ಷ ಸೌರವ ಗಂಗೂಲಿ ಹೇಳಿದ್ದಾರೆ. ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್ ಕೂಡ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಿದೆ.
ಮಾನವನ ಜೀವನವೇ ಅಪಾಯದಲ್ಲಿರುವಾಗ ಕ್ರೀಡೆಯ ಬಗ್ಗೆ ಚಿಂತಿಸುವುದು ಸರಿಯಲ್ಲ. ಎಂದು ಗಂಗೂಲಿ ಹೇಳಿದ್ದಾರೆ. ಈ ಮೂಲಕ ಭಾರತ ಮಾತ್ರವಲ್ಲದೆ ವಿಶ್ವದ ಯಾವುದೇ ಮೂಲೆಯಲ್ಲಿ ಮುಂದಿನ ಕೆಲ ತಿಂಗಳ ಮಟ್ಟಿಗೆ ಐಪಿಎಲ್ ಟೂರ್ನಿ ಆಯೋಜಿಸುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

"ಬಿಬಿಎಂಪಿ ಟೆಲಿ ಹೆಲ್ತ್ ಲೈನ್" ಸೇವೆಗೆ ಚಾಲನೆ

Thu Apr 23 , 2020
ಕೋವಿಡ್-೧೯ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯ ನಾಗರೀಕರು ವೈದ್ಯರೊಂದಿಗೆ ನಿಖರ ಮಾಹಿತಿ ಮತ್ತು ಸಲಹೆ ಪಡೆಯುವ ಉದ್ದೇಶದಿಂದ ಪಾಲಿಕೆಯು ಬ್ಲೂಮ್ ರ‍್ಗ್ ಫಿಲಾಂಥ್ರಪಿಸ್ ಹಾಗೂ ವೈಟಲ್ ಸ್ಟ್ರಾಟಜೀಸ್ ಸಹಯೋಗದಲ್ಲಿ “ಬಿಬಿಎಂಪಿ ಟೆಲಿ ಹೆಲ್ತ್ ಲೈನ್” ಸೇವೆಗೆ ಮಹಾಪೌರರು ಹಾಗೂ ಆಯುಕ್ತರು ಅಧಿಕೃತ ಚಾಲನೆ ನೀಡಿದರು. ಕೋವಿಡ್-೧೯ ಹಿನ್ನೆಲೆ ನಗರದ ನಾಗರೀಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಬಿಬಿಎಂಪಿಯು ಟೆಲಿ ಹೆಲ್ತ್ ಲೈನ್” ಆರಂಭಿಸಲಾಗಿದ್ದು, ೦೭೪೪೭೧೧೮೯೪೯ಗೆ ಉಚಿತವಾಗಿ ಕರೆ ಮಾಡಿ ಅಗತ್ಯ ಮಾಹಿತಿಯನ್ನು […]

Advertisement

Wordpress Social Share Plugin powered by Ultimatelysocial