ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೋನಾ ಹಾವಳಿ ನಿಯಂತ್ರಣ ತಪ್ಪುತ್ತಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನಾವು ೧೦,೦೦೦ ಹಾಸಿಗೆಗಳಿಗೆ ವ್ಯವಸ್ಥೆ ಮಾಡಿದ್ದೇವೆ. ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ತಂಡವು ಇಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ತೆಗೆದುಕೊಂಡ ಕೆಲವು ನಿರ್ಧಾರಗಳಿಗೆ ಮೆಚ್ಚುಗೆಯನ್ನು ಸೂಚಿಸಿದೆ. ಅಲ್ಲದೆ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಲಹೆಗಳನ್ನು ಸಹ ನೀಡಿದೆ. “ಕೊರೋನಾವೈರಸ್ ರೋಗಿಗಳಿಗೆ ತೊಂದರೆಯಾಗದAತೆ ಅವರನ್ನು ಕರೆದೊಯ್ಯಲು ಹೆಚ್ಚುವರಿ ಆಂಬ್ಯುಲೆನ್ಸ್ಗಳು ಬೇಕಾಗುತ್ತವೆ. ಕೆಲವು ಜಿಲ್ಲೆಗಳಲ್ಲಿ ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ಜಿಲ್ಲಾಧಿಕಾರಿಗಳು ಹಗಲು ರಾತ್ರಿ ಪಟ್ಟುಬಿಡದೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಕೊರೊನಾ ಪರಿಸ್ಥಿತಿ ನಿಯಂತ್ರಣ ಕೈ ತಪ್ಪಿದೆ..!
Please follow and like us: