ಬೆಂಗಳೂರು: ಕೊರೊನಾ ಲಾಕ್ಡೌನ್ ಹಿನ್ನಲೆಯಲ್ಲಿ ತಿಲಕ್ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸಿಪಿ ಸುಧೀರ್ ಹೆಗ್ಡೆ, ಇನ್ಸ್ಪೆಕ್ಟರ್ ಅನಿಲ್ಕುಮಾರ್ ನೇತೃತ್ವದಲ್ಲಿ ಪಥ ಸಂಚಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.. ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಪೊಲೀಸರಿಗೆ ಸ್ಥಳಿಯರು ಆರತಿ ಎತ್ತಿ, ಹೂವು ಚೆಲ್ಲಿ ಧನ್ಯವಾದ ಹೇಳಿದ್ದಾರೆ. ರಸ್ತೆಯುದ್ದಕ್ಕೂ ಸಾಮಾಜಿಕ ಅಂತರ ಕಾಯ್ದುಕೊಂಡು ನಿಂತಿದ್ದ ಸಾರ್ವಜನಿಕರು, ಪೊಲೀಸರ ಪಥ ಸಂಚಲನದ ವೇಳೆ ಚಪ್ಪಾಳೆ ತಟ್ಟಿ ಸೆಲ್ಯೂಟ್ ಮಾಡಿ ಅಭಿನಂದಿಸಿದರು.
ಕೊರೊನಾ ವಾರಿಯರ್ಸ್ಗೆ ಧನ್ಯವಾದ ಹೇಳಿದ ಸ್ಥಳೀಯರು
Please follow and like us: