ರಾಜ್ಯದಲ್ಲಿ ಮೇ 3ರವರೆಗೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಹೀಗಾಗಿ ಆ ಬಳಿಕ ಪರೀಕ್ಷೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕೊರೊನಾ ವಿರುದ್ಧ ಹೋರಾಟ ನಡೆಸುವುದು ಎಸ್ಎಸ್ಎಲ್ ಸಿಗಿಂತ ದೊಡ್ಡ ಪರೀಕ್ಷೆ . ಹೀಗಾಗಿ ಲಾಕ್ ಡೌನ್ ಬಳಿಕ ಪರೀಕ್ಷೆ ಯಾವಾಗ ಮಾಡಬೇಕು.ಮಕ್ಕಳಿಗೆ ಎಷ್ಟು ಸಮಯ ಕೊಡಬೇಕೆಂದು ಲಾಕ್ ಡೌನ್ ನಂತರ ನಿರ್ಧರ ಮಾಡಲಾಗುತ್ತೆ. ಕೆಲವರು ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದು ಅನುಮಾನ ಎಂದು ಗೊಂದಲ ಸೃಷ್ಟಿಸುತ್ತಿದ್ದಾರೆ. ಈ ಬಗ್ಗೆ ಕೆಲ ಪೋಷಕರಲ್ಲೂ ಆತಂಕವಿದೆ. ಆದರೆ, ಮಕ್ಕಳ ಮನಸ್ಸಿನಲ್ಲಿ ಗೊಂದಲವಿಲ್ಲ, ಮೇ.3 ರ ಬಳಿಕ ಪರೀಕ್ಷೆ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.