ಕೋವಿಡ್ ಮುಕ್ತ ಮಾಡಲು ಸರ್ಕಾರ ಪಣ ತೊಟ್ಟಿದೆ:ಬೊಮ್ಮಾಯಿ

ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಪ್ರಧಾನಿಗಳ ವಿಡಿಯೋ ಕಾನ್ಫರೆನ್ಸ್ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,  ಪ್ರಧಾನಿಗಳ ಸಲಹೆ ಸೂಚನೆ ಆಧರಿಸಿ ಲಾಕ್‌ಡೌನ್ ಕುರಿತು ನಿರ್ಧಾರ ಮಾಡುತ್ತೇವೆ. ಲಾಕ್‌ಡೌನ್ ಮುಂದುವರಿಯುವ ಕುರಿತು ಸದ್ಯಕ್ಕೆ ಯಾವುದೇ ನಿರ್ಧಾರ ಇಲ್ಲ. ರಾಜ್ಯದಲ್ಲಿನ ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಕರೋನಾ ಪರಿಸ್ಥಿತಿಯಿಂದ ಸಂತ್ರಸ್ತರಾದ ಜನರಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ. ರಾಜ್ಯವನ್ನು ಕೋವಿಡ್ ಮುಕ್ತ ಮಾಡಲು ಸರ್ಕಾರ ಪಣ ತೊಟ್ಟಿದೆ. ರಾಜ್ಯಾದ್ಯಂತ ವೈರಸ್ ನಿಯಂತ್ರಣಕ್ಕೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಸಹಕಾರದಿಂದ ವೈರಸ್ ಮುಕ್ತಗೊಳಿಸುವಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ಮೇ.15ರವರೆಗೆ ಲಾಕ್ ಡೌನ್ ಮುಂದುವರೆಕೆ ಸೂಕ್ತ..! :ಬಿಎಸ್ ವೈ

Mon Apr 27 , 2020
ರಾಜ್ಯದಲ್ಲಿ  ಕೊರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆ ಮೇ.15ರವರೆಗೆ ಲಾಕ್ ಡೌನ್ ಮುಂದುವರೆಸುವುದು ಸೂಕ್ತ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೇ ಮೇ.3ರ ಬಳಿಕ ಮತ್ತೆ ಲಾಕ್ ಡೌನ್ ಮುಂದುವರೆಸುವುದು ಸೂಕ್ತ. ಮೇ.15ರವರೆಗೆ ಲಾಕ್ ಡೌನ್ ವಿಸ್ತರಿಸಿದರೆ ಒಳಿತು. ಕೇಂದ್ರದ ನಿರ್ಧಾರಗಳಿಗೆ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ಸೂಚಿಸಿದೆ. ಆದರೆ, ಸದ್ಯದ ಆರ್ಥಿಕ ಪರಿಸ್ಥಿತಿ ನಿಟ್ಟಿನಲ್ಲಿ ಆರೆಂಜ್ […]

Advertisement

Wordpress Social Share Plugin powered by Ultimatelysocial