ದಾವಣಗೆರೆ : ಕೋವಿಡ್-19 ರೋಗದ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆ ಸಾರ್ವಜನಿಕರು ಕೂಡ ಕೈಜೋಡಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪರಾಮರ್ಶೆ ಸಭೆಯಲ್ಲಿ ಮಾತನಾಡಿದ ಸಚಿವರು, ಇದುವರೆಗೂ ರಾಜ್ಯ ಸರ್ಕಾರ ಅತ್ಯಂತ ಜವಾಬ್ದಾರಿಯುತವಾಗಿ ಕರೋನಾ ಸೋಂಕನ್ನು ಹಿಮ್ಮೆಟ್ಟಿಸಿದೆ. ಲಾಕ್ ಡೌನ್ ಸಡಿಲಿಕೆ ಬಳಿಕ ಜನರು ಕೂಡ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ ಎಂದರು.
ರಾಜ್ಯ ಸರ್ಕಾರ ಜನರ ಜೀವ ಮತ್ತು ಜೀವನವನ್ನು ಕಾಪಾಡುವ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಹೆಜ್ಜೆಗಳನ್ನು ನೀಡುತ್ತಿದೆ. ಜನರು ಕೂಡ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಕೆಲವೊಂದು ಎಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು .ಶುಚಿತ್ವದ ವಿಚಾರದಲ್ಲಿ ನಿರ್ಲಕ್ಷ್ಯ ತೋರಬಾರದು ಎಂದರು. ಕೊರೋನಾ ರೋಗಕ್ಕೆ ಲಸಿಕೆ ಮತ್ತು ಅಧಿಕೃತ ಚಿಕಿತ್ಸೆ ಲಭ್ಯವಾಗುವ ತನಕ ಕೆಲವು ಬದಲಾವಣೆಗಳ ಜೊತೆಗೆ ಕಟ್ಟಿಕೊಳ್ಳುವುದು ಅನಿವಾರ್ಯ. ಕರೋನ ರೋಗಾಣುವು ಇರುತ್ತದೆ ನಾವು ಇರಬೇಕು ಆದರೆ ಅದರಿಂದ ಅಂತರ ಕಾಯ್ದುಕೊಳ್ಳಬೇಕು ಅದು ಚಲಿಸುವುದಿಲ್ಲ ನಮ್ಮ ಜೊತೆ ಚಲಿಸುತ್ತಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಸಚಿವ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಕೋವಿಡ್-೧೯ ಪ್ರಯೋಗಾಲಯ ಉದ್ಘಾಟನೆ
Please follow and like us: