ಕ್ವಾರಂಟೈನ್ ನಲ್ಲಿದ್ದ ಯುವಕ ಆತ್ಮಹತ್ಯೆ

ಕ್ವಾರಂಟೈನ್ ನಲ್ಲಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಿಗ್ಗನ ಜಾವ ಔರಾದ  ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ಬೀದರ ಜಿಲ್ಲೆ ಔರಾದ ತಾಲೂಕಿನ ನಾರಾಯಣಪೂರ ಗ್ರಾಮದ 22 ವರ್ಷದ ಯುವಕ  ಮುಂಬೈನಿಂದ ವಾಪಸ್ ಬಂದು ಮರಪಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ತನ್ನ ಹೆಂಡತಿಯೊಂದಿಗೆ ಕಳೆದ ಎಂಟು ದಿನಗಳಿಂದ ಕ್ವಾರಂಟೈನ್ ನಲ್ಲಿದ್ದ. ಇಂದು ಮುಂಜಾನೆ ಪತ್ನಿ ಸ್ನಾನಕ್ಕೆಂದು ತೆರಳಿದಾಗ ಈತ ನೇಣಿಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ. ಎರಡು ತಿಂಗಳ ಹಿಂದೆಯಷ್ಟೇ ಇವರ ಮದುವೆ ನೆರವೇರಿತ್ತು. ದುರಾದ್ರುಷ್ಟ ವಶಾತ್ ಈ ದುರ್ಘಟನೆ ನಡೆದಿರುವುದು ನಿಜಕ್ಕು ಬೇಸರದ ಸಂಗತಿಯೇ ಸರಿ. ಘಟನೆ ನಡೆದ ಸ್ಥಳಕ್ಕೆ ಔರಾದ ಪೊಲೀಸ್ ರು  ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿದ್ದಾರೆ. ಸಾವಿಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ ತನಿಖೆ ನಂತರವೇ ಕಾರಣ ತಿಳುದು ಬರಲಿದೆ ಎಂದು ಔರಾದ ಪೊಲೀಸ್ ರು ಇದೇ ಸಂದರ್ಭದಲ್ಲಿ ತಿಳಿಸಿದರು.

Please follow and like us:

Leave a Reply

Your email address will not be published. Required fields are marked *

Next Post

   ಕೋಟೆನಾಡಿಗೂ ಕೋವಿಡ್ ಶಾಕ್

Tue May 26 , 2020
ಕೋಟೆನಾಡು ಎಂದೇ ಪ್ರಸಿದ್ದವಾದ ಚಿತ್ರದುರ್ಗ ಇವತ್ತು ಒಂದೇ ದಿನ ಜಿಲ್ಲೆಯಲ್ಲಿ  20 ಹೊಸ ಕೊರೊನಾ  ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇಂದು ಕೋವಿಡ್ ಸೋಂಕು ಪತ್ತೆಯಾದ ವ್ಯಕ್ತಿಗಳೆಲ್ಲರೂ ಉತ್ತರ ಪ್ರದೇಶ ಮೂಲದ ವಲಸೆ ಕಾರ್ಮಿಕರಾಗಿದ್ದು ಇವರೆಲ್ಲರನ್ನೂ ಕ್ವಾರೆಂಟೈನ್ ನಲ್ಲಿಡಲಾಗಿತ್ತು. ಉತ್ತರಪ್ರದೇಶ ಮೂಲದ ಈ ಕಾರ್ಮಿಕರು ತಮಿಳುನಾಡಿನಿಂದ ಒಂದೇ ಲಾರಿಯಲ್ಲಿ 57 ಜನ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಮೇ. 20ರಂದು ಇವರನ್ನು ಚಳ್ಳಕೆರೆ ಬಳಿ ಚೆಕ್ ಪೋಸ್ಟ್ ನಲ್ಲಿ ತಡೆದು ಥರ್ಮಲ್ […]

Advertisement

Wordpress Social Share Plugin powered by Ultimatelysocial