ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ಲಾಕ್ ಡೌನ್ ಜಾರಿಗೊಳಿಸಿದೆ, ನಗರದಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಚಿಕಿತ್ಸೆ ಸಿಗದೆ ಗರ್ಭಿಣಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಕಡಪಟ್ಟಿ ಗ್ರಾಮದ ನಿವಾಸಿ ರೂಪಾ ಶಿವಾನಂದ ಹೊಸಮನಿ(23) ಮೃತ ಗರ್ಭಿಣಿ. ಕೊರೊನಾ ಹಿನ್ನೆಲೆ ರೋಗಿಗಳನ್ನು ದಾಖಲು ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆ ವೈದ್ಯರ ಹಿಂದೇಟು ಹಾಕುತ್ತಿದ್ದಾರೆ. ಆಂಬುಲೆನ್ಸ್ ನಲ್ಲಿ ಗರ್ಭಿಣಿಯನ್ನು ಹೊತ್ತು ವಿವಿಧ ಖಾಸಗಿ ಆಸ್ಪತ್ರೆಗೆ ಸಂಬಂಧಿಕರ ಅಲೆದಾಟ ನಡೆಸಿದ್ದಾರೆ. ಆದ್ರೆ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರಕದ ಕಾರಣ ಕೊನೆಗೆ ಮಹಿಳೆಯನ್ನು ಜಮಖಂಡಿ ತಾಲ್ಲೂಕಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ ವಿಜಯಪುರ ಖಾಸಗಿ ಆಸ್ಪತ್ರಗೆ ಹೊರಟ ವೇಳೆ ಜಮಖಂಡಿ ಹೊರವಲಯದಲ್ಲಿ ಗರ್ಭಿಣಿ ಕೊನೆಯುಸಿರೆಳೆದಿದ್ದಾರೆ. ಮೃತಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ