ಗೂಂಡಾ ಪ್ರವೃತ್ತಿ ಸಹಿಸಲ್ಲ ಎಂದ ಸಿಎಂ ಬಿಎಸ್ ವೈ

ಪಾದರಾಯನಪುರದಲ್ಲಿ ಗೂಂಡಾಗಿರಿ ನಡೆದಿದೆ.‌ ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ. ೫೪ ಜನರನ್ನು ಇದುವರೆಗೆ ಬಂಧಿಸಲಾಗಿದೆ ಎಂದು  ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಬೆಂಗಲೂರಿನಲ್ಲಿ ಮಾತನಾಡಿದ ಅವರು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ದ ಕಠಿಣ ‌ಕ್ರಮ‌ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗೂಂಡಾಗಿರಿ ಪ್ರವೃತ್ತಿಯನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ.‌ ಶೀಘ್ರದಲ್ಲೇ ‌ಮತ್ತಷ್ಡು ಕಿಡಿಗೇಡಿಗಳನ್ನು ಬಂಧಿಸಲಾಗುವುದು.ಸರ್ಕಾರ ಮಾಡುವ ಕೆಲಸಕ್ಕೆ ಜಮೀರ್ ಅಹ್ಮದ್ ಅನುಮತಿ ಯಾಕೆ ಕೇಳಬೇಕು. ಅವರು ಯಾರು. ಅವರ ಹೇಳಿಕೆ ನೋಡಿದರೆ ಇಂತಹ ಗಲಭೆಗೆ‌ ಅವರೇ ಪ್ರಚೋದನೆ ‌ನೀಡುತ್ತಿದ್ದಾರೆಂದು ಭಾವಿಸಬೇಕೆ? ರಾಜ್ಯದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಈ ರೀತಿಯ ಗೂಂಡಾ ಪ್ರವೃತ್ತಿ ಸಹಿಸುವ ಪ್ರಶ್ನೆ ‌ಇಲ್ಲ.‌ ಇದರಲ್ಲಿ ಯಾವ ಧರ್ಮ, ಜಾತಿಯ ಪ್ರಶ್ನೆಯಿಲ್ಲ.‌ ಗೂಂಡಾಗಿರಿ ಮಾಡುವವರ ವಿರುದ್ದ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು.

 

Please follow and like us:

Leave a Reply

Your email address will not be published. Required fields are marked *

Next Post

ಮುಲಾಜಿಲ್ಲದೆ ಬಂಧಿಸಿ ಎಂದ ಸಿಟಿ ರವಿ

Mon Apr 20 , 2020
ಪಾದರಾಯನಪುರದಲ್ಲಿ ವೈದ್ಯಕೀಯ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ದ ದೌರ್ಜನ್ಯ ನಡೆಸುವ ಪ್ರಯತ್ನ ಮಾಡಿದವರನ್ನು ಮುಲಾಜಿಲ್ಲದೆ ಬಂಧಿಸಿ ಕಠಿಣ‌‌ ಕ್ರಮ ಜರುಗಿಸಬೇಕು ಎಂದು  ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂತಹವರ ನಿಯಂತ್ರಿಸದಿದ್ದರೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ.‌ ಹೀಗಾಗಿ ಈ ರೀತಿ ಪುಂಡಾಟ ಮಾಡಿದವರನ್ನು ಕೂಡಲೇ  ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಗೃಹ ಸಚಿವರು ಇಂತಹವರನ್ನು ಮಟ್ಟ ಹಾಕಬೇಕು ಎಂದು ಒತ್ತಾಯ ಮಾಡಿದ್ದೇನೆ. […]

Advertisement

Wordpress Social Share Plugin powered by Ultimatelysocial