ಚರ್ಮ ಕುಶಲ ಕರ್ಮಿಗಳಿಗೆ   ವಿಶೇಷ ಪ್ಯಾಕೇಜ್

ಕೊರೊನಾ ಪರಿಣಾಮ ರಸ್ತೆ ಬದಿಯಲ್ಲಿ ಚರ್ಮ ವೃತ್ತಿಯಲ್ಲಿ ತೊಡಗಿದವರು ಸಂಕಷ್ಟದಲ್ಲಿದ್ದಾರೆ. ಅವರ ಜೀವನೋಪಾಯಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಡಿಸಿಎಂ ಗೋವಿಂದ್ ಕಾರಜೋಳ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,  ರಾಜ್ಯದ 11,722 ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ತಲಾ 5 ಸಾವಿರದಂತೆ ಒಂದು ಬಾರಿ ಪರಿಹಾರವನ್ನು ಸರ್ಕಾರ ನೀಡಿದೆ. ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಈ ಫಲಾನುಭವಿಗಳಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಈ ವಿಶೇಷ ಪ್ಯಾಕೇಜ್ ನಿಂದ ಚರ್ಮ ಕುಶಲ ಕರ್ಮಿಗಳಿಗೆ ಜೀವನೋಪಾಯಕ್ಕೆ ನೆರವಾಗಲಿದೆ. ಈ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಮುಖ್ಯಮಂತ್ರಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರವಾಗಿ ಅಭಿನಂದನೆ ಎಂದು ಹೇಳಿದರು.

ವರದಿ:ಪೊಲಿಟಿಕಲ್ ಬ್ಯೂರೋ ಸ್ಪೀಡ್ ನ್ಯೂಸ್ ಕನ್ನಡ

Please follow and like us:

Leave a Reply

Your email address will not be published. Required fields are marked *

Next Post

ಮಂಗಳೂರು ರೈಲು ನಿಲ್ದಾಣದಲ್ಲಿ ಪ್ರತಿಭಟನೆ

Fri May 8 , 2020
ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ವಲಸೆ ಕಾರ್ಮಿಕರನ್ನು ರೈಲಿನ ಮೂಲಕ ಊರಿಗೆ ಕಳುಹಿಸಿ ಕೊಡಲಾಗುತ್ತದೆ ಎಂಬ ವದಂತಿ ಮಂಗಳೂರಿನಲ್ಲಿ ಹಬ್ಬಿದ್ದು, ಇದರಿಂದಾಗಿ ಇಲ್ಲಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಾವಿರಾರು ಜನರ ಸೇರಿ ಗೊಂದಲ ಉಂಟಾದ ಘಟನೆ ಇಂದು ನಡೆದಿದೆ. ಮಂಗಳೂರಿನಿಂದ ರೈಲಿನಲ್ಲಿ ವಲಸೆ ಕಾರ್ಮಿಕರನ್ನು ತಮ್ಮ ಊರಿಗೆ ಕಳುಹಿಸುತ್ತಾರೆ ಅಂತ ವದಂತಿ ಹರಡಿತ್ತು. ಇಂದು ಮುಂಜಾನೆಯಿಂದಲೇ ಸಾವಿರಾರು ಕಾರ್ಮಿಕರು ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬಂದಿದ್ದರು. ಆದರೆ ರೈಲ್ವೇ ಸಿಬ್ಬಂದಿ‌‌ ಯಾವುದೇ […]

Advertisement

Wordpress Social Share Plugin powered by Ultimatelysocial