ಮೈಸೂರು : ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಹಲ್ಲೆ ಪ್ರಕರಣ ಖಂಡನೀಯ. ಘಟನೆ ಕುರಿತು ಬೇಜವಾಬ್ದಾರಿ ತೋರಿದ ಶಾಸಕ ಜಮೀರ್ ಅಹಮದ್ ರನ್ನು ಕಾಂಗ್ರೆಸ್ ಪಕ್ಷವೇ ಹೊರ ಹಾಕಬೇಕೆಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ. ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡಿದ ವಿಶ್ವನಾಥ್, ಜಮೀರ್ ಮಾತುಗಳು ಸಾಮಾನ್ಯ ಅಲ್ಪ ಸಂಖ್ಯಾತರ ಭವಿಷ್ಯಕ್ಕೆ ಮುಳುವಾಗಿದೆ. ಜಮೀರ್ ಅಹಮದ್ ಖಾನ್ ಅವರದ್ದು ಸಮಾಜಘಾತುಕ ನಡವಳಿಕೆ. ಅಲ್ಪ ಸಂಖ್ಯಾತ ನಾಯಕರೇ ಅಲ್ಪ ಸಂಖ್ಯಾತರ ಭವಿಷ್ಯಕ್ಕೆ ಮಾರಕವಾಗುತ್ತಿದ್ದಾರೆ . ವಾರದಲ್ಲಿ ಎರಡು ದಿನ ಮದ್ಯ ಮಾರಾಟ ಮಾಡುವ ಮೂಲಕ ವ್ಯಸನಿಗಳು ಸಾವನ್ನಪ್ಪುತ್ತಿರುವುದನ್ನು ತಪ್ಪಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕಾಳ ಸಂತೆಯಲ್ಲಿ ಮದ್ಯ ಮಾರಾಟ ಆಗುವುದನ್ನು ತಪ್ಪಿಸಬೇಕು. ವಾರದಲ್ಲಿ ಎರಡು ದಿನ ಎಲ್ಲ ವೈನ್ ಶಾಪ್, ಎಂಎಸ್ಐಎಲ್ ಮಳಿಗೆಗಳಲ್ಲಿ ನಿಗದಿತ ಅವಧಿಯಲ್ಲಿ ಮದ್ಯ ಮಾರಾಟವಾಗಬೇಕೆಂದು ಹೇಳಿದರು.
ಜಮೀರ್ ಅವರದ್ದು ಸಮಾಜಘಾತುಕ ನಡವಳಿಕೆ
Please follow and like us: