ಮೈಸೂರು : ನಂಜನಗೂಡು ಜ್ಯುಬಿಲೆಂಟ್ ಕಾರ್ಖಾನೆ ನೌಕರರಿಂದ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಕಾರ್ಖಾನೆ ನೌಕರರ ಸಂಪರ್ಕ ಹೊಂದಿದ್ದ ಐದು ಗ್ರಾಮಗಳನ್ನ ಸೀಲ್ ಡೌನ್ ಮಾಡಲಾಗಿದೆ. ಕೂಗಲೂರು, ಬ್ಯಾಳೂರು, ದೇವರಸನಹಳ್ಳಿ, ಬಸಪುರ, ತಾಂಡಾಪುರ ಗ್ರಾಮಗಳನ್ನು ಸೀಲ್ ಡೌನ್ ಮಾಡಲು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಆದೇಶಿಸಿದ್ದಾರೆ. ಇನ್ನು ಸೀಲ್ಡೌನ್ ಆದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು ಜ್ಯುಬಿಲೆಂಟ್ ಕಾರ್ಖಾನೆಯ 52ನೇ ಸೋಂಕಿತನ ಸಂಪರ್ಕದಿಂದ ಈಗಾಗಲೇ 65 ಜನರು ಕೊರೊನಾ ಪಾಸಿಟಿವ್ ಗೆ ಒಳಗಾಗಿದ್ದಾರೆ. ಸುಮಾರು ಎರಡು ಸಾವಿರಕ್ಕೂ ಅಧಿಕ ಜನರು ಹೋಂ ಕ್ವಾರಂಟೈನ್ ಮುಗಿಸಿದ್ದು, ಮತ್ತಷ್ಟು ಮಂದಿಗೆ ಸೋಂಕು ಹರಡಬಹುದು ಎಂದು ಗ್ರಾಮಗಳನ್ನ ಸೀಲ್ಡೌನ್ ಮಾಡಲಾಗಿದೆ. ಇನ್ನು ಸೀಲ್ಡೌನ್ ಹಿನ್ನೆಲೆ ಗ್ರಾಮದ ಮುಖ್ಯದ್ವಾರಗಳಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಜರುಗಿಸೋದಾಗಿ ಎಚ್ಚರಿಕೆ ನೀಡಿದ್ದಾರೆ.