ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ವಿರೇಶ್ ಕುರವತ್ತಿ ಎಂಬ ಯುವಕ ಕೊರೊನಾ ಸಂಬಂಧ ನಡೆಯುತ್ತಿರುವ ಪ್ರಯೋಗಕ್ಕೆ ತನ್ನ ದೇಹವನ್ನು ಬಳಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾನೆ.ಯುವಕ ವಿರೇಶ್ ಕುರುವತ್ತಿ ನರಸಾಪುರದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಓದುತ್ತಿದ್ದು, ಎಬಿವಿಪಿ ಕಾರ್ಯಕರ್ತನಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾನೆ.ದೇಶಕ್ಕಾಗಿ ತನ್ನಿಂದ ಏನಾದರೂ ಸೇವೆ ಮಾಡಲು ಮನಸ್ಸು ಹಂಬಲಿಸುತ್ತಿತ್ತು. ಕೊನೆ ಪಕ್ಷ ಕೊರೊನಾ ವೈರಸ್ ಔಷಧಿ ಪ್ರಯೋಗಕ್ಕಾದರೂ ನನ್ನ ದೇಹ ದಾನ ಮಾಡಿ ವಿಶ್ವದಲ್ಲಿ ಆಗುತ್ತಿರುವ ಸಾವು-ನೋವುಗಳು ನಿಯಂತ್ರಣಕ್ಕೆ ಬರಲು ಸಹಕಾರಿಯಾಗುತ್ತದೆ ಎಂದು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾನೆ.
ದೇಹ ದಾನ ಮಾಡಲು ಮುಂದಾದ ಯುವಕ

Please follow and like us: