ಧಾರ್ಮಿಕ ಕೇಂದ್ರಗಳ ಮರು ಆರಂಭ

ಬೆಂಗಳೂರು: ನಾಲ್ಕನೇ ಹಂತದ ಲಾಕ್‌ಡೌನ್ ಮುಗಿದ ಮೇಲೆ ದೇವಸ್ಥಾನಗಳ ಜೊತೆ ಮಸೀದಿ, ಚರ್ಚ್‌ಗಳಿಗೂ ಬಾಗಿಲು ತೆರೆಯಲು ಅವಕಾಶ ಕೊಡಲಾಗುತ್ತದೆ. ಆದರೆ ಈ ಸಂಬಂಧ ಕೇಂದ್ರ ಸರ್ಕಾರದಿಂದ ಅನುಮತಿ ಸಿಗಬೇಕುಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ನಡೆದ ಪಂಡಿತ್ ಜವಹರಲಾಲ್ ನೆಹರೂ ಅವರ 56 ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇರುವ ನೆಹರು ಅವರ ಪ್ರತಿಮೆಗೆ ಸಿಎಂ‌ ಯಡಿಯೂರಪ್ಪ ಮಾಲಾರ್ಪಣೆ ಸಲ್ಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು. ದೇವಸ್ಥಾನಗಳನ್ನು ತೆರೆದರೆ ಮಸೀದಿ, ಚರ್ಚ್‌ಗಳನ್ನೂ ತೆರೆಯಲಾಗುತ್ತದೆ. ಕೇಂದ್ರ ಸರ್ಕಾರಕ್ಕೆ ಮೇ.26 ರಂದು ಈ ಬಗ್ಗೆ ಪತ್ರ ಬರೆಯಲಾಗಿದೆ. ದೇವಸ್ಥಾನ, ಮಸೀದಿ, ಚರ್ಚ್ ತೆರೆಯುವುದು ಸೇರಿ ಹಲವು ಚಟುವಟಿಕೆಗಳಿಗೆ ಅವಕಾಶ ಕೇಳಿದ್ದೇವೆ. ಕೇಂದ್ರದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಸಿಎಂ ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

  ಡಿಕೆಸಿಗೆ ಆರ್. ಅಶೋಕ ಟಾಂಗ್

Wed May 27 , 2020
ಡಿ.ಕೆ. ಶಿವಕುಮಾರ್ ಎಲ್ಲೆಂದರಲ್ಲಿ ಬಂದು ಜೇಬಲ್ಲಿ ಕೈ ಹಾಕುತ್ತಾರೆ. ಎಲ್ಲದಕ್ಕು ನಾನು ಕೊಡುತ್ತೇನೆ ಎನ್ನುವುದು ಅವರ ಆಡಂಬರ, ಇದು ಹುಡುಗಾಟಿಕೆ ಎಂದು ಸಚಿವ ಆರ್ ಅಶೋಕ್ ಟಾಂಗ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿ.ಕೆ.ಶಿವಕುಮಾರ್ ಅವರೆ ನೀವು ಎಲ್ಲೆಂದರಲ್ಲಿ ಬಂದು ಜೇಬಲ್ಲಿ ಕೈ ಹಾಕುವುದು ಬೇಡ. ಅದಕ್ಕಾಗಿ ನಮ್ಮ ಸರ್ಕಾರ ಕ್ರಮಕೈಗೊಂಡಿದೆ ನೀವು ಹಿಂದೆ ಕೊಟ್ಟ ಚೆಕ್‌ನ್ನು ನಮ್ಮವರು ಇನ್ನು ಸ್ವೀಕರಿಸಿಲ್ಲ. ನೀವು ಇನ್ನು ಅಧ್ಯಕ್ಷರಾಗಿಲ್ಲ. ಅಧ್ಯಕ್ಷರಾದ ಮೇಲೆ ಚೆಕ್‌ಗೆ […]

Advertisement

Wordpress Social Share Plugin powered by Ultimatelysocial