ನರೇಗಾ ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ

ಬೀದರ: ವಿಧಾನಪರಿಷತ್ ಸದಸ್ಯರಾದ ವಿಜಯಸಿಂಗ್   ಬೀದರ್ ದಕ್ಷಿಣ ಕ್ಷೇತ್ರದ ಮನ್ನಳ್ಳಿ ಹಾಗೂ ಹೋಕ್ರಾಣಾ ಗ್ರಾಮ ಪಂಚಾಯತ್‌ಗಳಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಿಸಿದರು . ಕೂಲಿ ಕಾರ್ಮಿಕರಿಗೆ ಲಾಕ್‌ಡೌನ್ ನಿಂದ ಆರ್ಥಿಕ ಸಂಕಷ್ಟ ಎದುರಾಗಬಾರದೆಂಬ ಉದ್ದೇಶದಿಂದ ನರೇಗಾ ಯೋಜನೆಯಡಿ ಉದ್ಯೋಗ ಖಾತ್ರಿ ಕೆಲಸ ನಿಡಲಾಗುತ್ತಿದ್ದು, ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಲು  ಸೂಚಿಸಿದರು. ಕೊರೊನಾ ಮಹಾಮಾರಿ ರೋಗ ಹೆಚ್ಚುತ್ತಿರುವುದರಿಂದ ಕೂಲಿ ಕಾರ್ಮಿಕರಿಗೆ ಮಾಸ್ಕ್ ಗಳನ್ನು ವಿತರಿಸಲಾಯಿತು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಸೂಚಿಸಿದರು.  ಈ ಸಂಧರ್ಭದಲ್ಲಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರು, ತಾಲ್ಲೂಕು ಪಂಚಾಯತ್ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಅನಧಿಕೃತ ಹೋಮ್ ಸ್ಟೇ ಕಟ್ಟಡ ತೆರವುಗೊಳಿಸಿ 

Wed Jun 3 , 2020
ಚಾಮರಾಜನಗರ: ಅನಧಿಕೃತ ನಿರ್ಮಾಣದ ಕಟ್ಟಡವನ್ನು 10 ದಿನದೊಳಗೆ ತೆರವುಗೊಳಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ  ಗುಂಡ್ಲುಪೇಟೆ ತಹಶೀಲ್ದಾರರಿಗೆ ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಒಳಪಟ್ಟ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿ ಮಂಗಲ ಗ್ರಾಮದಲ್ಲಿ ಬೀಗಮುದ್ರೆ ಮಾಡಿದ ಹೋಮ್ ಸ್ಟೇ ಕೊಠಡಿ ತೆರೆದು ದುರಸ್ಥಿ ಕಾರ್ಯ ಕೈಗೊಂಡಿರುವ ಅನಧಿಕೃತ ಕಟ್ಟಡಗಳನ್ನ ತೆರವುಗೊಳಿಸಿ. ಗುಂಡ್ಲುಪೇಟೆ ತಾಲೂಕು ಹಂಗಳ ಹೋಬಳಿ ಮಂಗಲ ಗ್ರಾಮದ ಸರ್ವೆ […]

Advertisement

Wordpress Social Share Plugin powered by Ultimatelysocial