ನರೇಗಾ ಕಾಮಗಾರಿ ವೀಕ್ಷಿಸಿದ ಸಚಿವ

ರಾಯಚೂರು: ರಾಯಚೂರು ಜಿಲ್ಲೆಯ ಯರಗೇರಾ ಗ್ರಾಮದ  ಪ್ರೌಢಶಾಲೆಯಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ  ಮಳೆ ನೀರು ಕೊಯ್ಲು ಯೋಜನೆ ಕಾಮಗಾರಿಯನ್ನ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಸಚಿವ ಕೆ.ಎಸ್.ಈಶ್ವರಪ್ಪ ವೀಕ್ಷಣೆ ಮಾಡಿದರು.

ಕೊರೊನಾ ರೋಗದಿಂದ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಕೆಲಸ ಇಲ್ಲ. ಹೀಗಾಗಿ  ನರೇಗಾ ಮೂಲಕ ಹಳ್ಳಿ ಜನರಿಗೆ ಉದ್ಯೋಗ ನೀಡುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ. ರಾಜ್ಯದಲ್ಲಿ ನರೇಗಾ ಕಾಮಗಾರಿ ಉತ್ತಮ ಯಶಸ್ಸನ್ನು ಕಂಡಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸುಮಾರು 5 ಸಾವಿರ 800 ನೂರು ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿಗಳು ಪ್ರಗತಿಯಲ್ಲಿವೆ. ವಿಶೇಷವಾಗಿ ರಾಯಚೂರು ಜಿಲ್ಲೆಯಲ್ಲಿ ಪ್ರತಿ ದಿನ 1ಲಕ್ಷಕ್ಕೂ ಹೆಚ್ಚು ಜನರು ನರೇಗಾ ಯೋಜನೆಯಲ್ಲಿ  ಕೆಲಸ ಮಾಡುತ್ತಿದ್ದಾರೆ.

ಈ ಹಿಂದೆ ನರೇಗಾ ಕಾಮಗಾರಿಯನ್ನು ಮಾಡಿದ ಜನರ ಬಾಕಿ ಇದ್ದ ಹಣವನ್ನು ಈಗಾಗಲೇ ಅವರಿಗೆ ನೀಡಲಾಗಿದೆ. ಮುಂಚೆ 249 ರೂ ಇದ್ದ ಕೂಲಿ ಈಗ 275 ರೂಪಾಯಿಗೆ ಹೆಚ್ಚಳವನ್ನು ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸು ಕೂಡ ಜನರಿಗೆ ಉದ್ಯೋಗ ನೀಡುವುದು.  ಜನರ ಅಪೇಕ್ಷೆ ಕೂಡ ಅದೇ ಆಗಿದೆ.  ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ಮಟ್ಟದಲ್ಲಿ ಎಲ್ಲರಿಗೂ ನರೇಗಾ ಮೂಲಕ ಉದ್ಯೋಗವನ್ನು  ನೀಡಲಾಗುತ್ತಿದೆ.  ಕೆರೆಗಳ ಹೂಳು ತೆಗೆಯುವುದು, ಬದು ನಿರ್ಮಾಣ ಹಾಗೂ ಅಂತರ್ಜಲ ಹೆಚ್ಚಿಸುವಂತ ಎಲ್ಲ ಕಾಮಗಾರಿಗಳನ್ನು ನರೇಗಾ ಮೂಲಕ ಮಾಡಲಾಗುತ್ತಿದೆ. ಇದರಿಂದಾಗಿ ರಾಜ್ಯ ಪ್ರಗತಿ ಹೊಂದುತ್ತಿದೆ ಎಂದರು.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಸೂಪರ್ ಸಿಎಂ ವಿಜಯೇಂದ್ರ : ಸಿದ್ದರಾಮಯ್ಯ

Thu Jun 4 , 2020
ಮೈಸೂರು: ರಾಜ್ಯದಲ್ಲಿ ಸೂಪರ್ ಸಿಎಂ ವಿಜಯೇಂದ್ರ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಎಸ್.ಟಿ.ಸೋಮಶೇಖರ್, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ಮಗ ಕಡ್ಲೆಪುರಿ ತಿನ್ನುತ್ತಿದ್ದನಾ? ಎಂದು ಏಕವಚನದಲ್ಲೇ ಪ್ರಶ್ನಿಸಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯ ಪ್ರಯುಕ್ತ ನಗರದ ಕೆ.ಆರ್.ವೃತ್ತದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ನಾನು ಮಂತ್ರಿಯಾಗಿ 3 ತಿಂಗಳಾಗಿದ್ದು, ಇದುವರೆಗೂ ವಿಜಯೇಂದ್ರ ಒಂದು ಬಾರಿಯೂ ನಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದರು. ವಿಧಾನ ಪರಿಷತ್ ಸ್ಥಾನಗಳನ್ನು ಭರ್ತಿ […]

Advertisement

Wordpress Social Share Plugin powered by Ultimatelysocial