ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ದೂರು

ಲಾಕ್‌ಡೌನ್ ಸಂದರ್ಭದಲ್ಲಿ ಜನರನ್ನು ದಾರಿ ತಪ್ಪಿಸುವ ಹೇಳಿಕೆಯನ್ನ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು ನೀಡಿದೆ. ದೇಶದಲ್ಲಿ ಕೋವಿಡ್‌19 ನಿಯಂತ್ರಣಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದಿದ್ದಾರೆ. ಅಲ್ಲದೆ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಪ್ರಧಾನಿ ಮೋದಿಗೆ ಅವಕಾಶ ಕೊಟ್ಟಿದ್ದಾರೆ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಜಾವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯಾಗಿಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನ ದಾರಿತಪ್ಪಿಸುತ್ತಿದ್ದಾರೆ. ಕೂಡಲೇ ಕಟೀಲು ಅವರ ಹೇಳಿಕೆಗಳ ಬಗ್ಗೆ ಕ್ರಮಕೈಗೊಳ್ಳಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಕೋರ್ಟ್  ಕಲಾಪ ಆರಂಭ

Wed May 27 , 2020
ಬೆಂಗಳೂರು: ಲಾಕ್ ಡೌನ್ ಘೋಷಣೆ ಬಳಿಕ ಸ್ಥಗಿತಗೊಂಡಿದ್ದ ಕರ್ನಾಟಕ ಹೈಕೋರ್ಟ್ ಮತ್ತು ಇತರ ಜಿಲ್ಲಾ ನ್ಯಾಯಾಲಯಗಳ ಕಲಾಪ ಜೂನ್ 1ರಿಂದ ಆರಂಭವಾಗಲಿದೆ. ನ್ಯಾಯಾಲಯ ಕಲಾಪದ ವೇಳೆ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ 38 ಅಂಶಗಳ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ವಕೀಲರು ಮತ್ತು ಸಿಬ್ಬಂದಿಗಳು ಇವುಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಜಿಲ್ಲಾ ನ್ಯಾಯಾಲಯಗಳಿಗೆ ಈ ಮಾರ್ಗಸೂಚಿಗಳನ್ನು ಕಳುಹಿಸಲಾಗಿದೆ.  ನ್ಯಾಯಾಲಯದ ಕಲಾಪಗಳು ಆರಂಭವಾದ ಬಳಿಕ ಬೆಳಗ್ಗೆ 10 ಮತ್ತು […]

Advertisement

Wordpress Social Share Plugin powered by Ultimatelysocial