ನಾಳೆ ಸಿಎಂ ಬಿಎಸ್ ವೈ ಭೇಟಿ ಮಾಡಲಿರುವ ಸಿದ್ದರಾಮಯ್ಯ ..!

ಮಾರಣಾಂತಿಕ ಕೊರೋನಾ ವೈರಸ್‌ ವಿರುದ್ಧ ಹೋರಾಡುವ ಸಲುವಾಗಿ ಚರ್ಚಿಸಲು ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಬಿ.ಎಸ್‌. ಯಡಿಯೂರಪ್ಪ ನಾಳೆ ಗೃಹ ಕಚೇರಿ ಕೃಷ್ಣಾದಲ್ಲಿ ಒಂದಾಗಲಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ಸಂಬಂಧಿಸಿದಂತೆ ಚರ್ಚಿಸಲು ಸಿಎಂ ಬಿಎಸ್‌ವೈ ಭೇಟಿಗೆ ಸಿದ್ದರಾಮಯ್ಯ ಅವರು ಅವಕಾಶ ಕೇಳಿ ಪತ್ರ ಬರೆದಿದ್ದರು. ಈ ಹಿನ್ನೆಲೆ ಇಂದು ಸಿಎಂ ಕಛೇರಿಯಿಂದ ಭೇಟಿಗೆ ಅನುಮತಿ ದೊರೆತಿದ್ದು, ನಾಳೆ ಬೆಳಗ್ಗೆ 11-30 ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಚರ್ಚೆ ನಡೆಸಲು ಅವಕಾಶ ನೀಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಒಳಗೊಂಡಂತೆ ಕಾಂಗ್ರೆಸ್‌ ಪಕ್ಷದ ಕೆಲವು ನಾಯಕರು ನಾಳೆ ಸಿಎಂ ಬಿಎಸ್‌ವೈ ಅವರನ್ನು ಭೇಟಿ ಮಾಡಲಿದ್ದಾರೆ. ರಾಜ್ಯದಲ್ಲಿ ಕೊರೋನಾ ವೈರಸ್‌ ನಿಯಂತ್ರಣದ ಕುರಿತು ಮಹತ್ವದ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆ

Thu May 7 , 2020
ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ತಲ್ಲಣ ಸೃಷ್ಟಿಸಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ರಾಜ್ಯದಲ್ಲಿ ಇಂದು ಮತ್ತೆ 8 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕು ಪೀಡಿತರ ಸಂಖ್ಯೆ 701ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದಾವಣಗೆರೆಯಲ್ಲಿ ಮಹಿಳೆಯೊಬ್ಬರು ಬಲಿಯಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಪತ್ತೆಯಾಗಿರುವ ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳ ಪೈಕಿ ದಾವಣಗೆರೆಯಲ್ಲಿ 3, ಕಲಬುರಗಿಯಲ್ಲಿ 3, ಬೆಂಗಳೂರು ಹಾಗೂ […]

Advertisement

Wordpress Social Share Plugin powered by Ultimatelysocial