ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಸರಿಯಲ್ಲ: ಶ್ರೀ ರಾಮುಲು

ಮಂಡ್ಯದಲ್ಲಿ ಆರೋಗ್ಯ ತಪಾಸಣೆ ವೇಳೆ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಮಾರಕ ಕೊರೊನಾ ಸೋಂಕು ಪರಿಸ್ಥಿತಿಯ ನಡುವೆಯೂ ಪತ್ರಕರ್ತರು ತಮ್ಮ ಪ್ರಾಣದ ಹಂಗುತೊರೆದು ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಆರೋಗ್ಯ ತಪಾಸಣೆಗೆ ಅಡ್ಡಿಪಡಿಸಿ, ಅವರ ಮೇಲೆ ಹಲ್ಲೆ ನಡೆಸಿರುವುದು ಸರಿಯಲ್ಲ. ಎಂಎಲ್ ಸಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನಿಂದ ಈ ದೃಷ್ಕೃತ್ಯ ನಡೆದಿರುವುದು ಬೇಸರ ತರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆಮಾಡಿದ್ದೇವೆ.ಈ  ಘಟನೆ ಹಿನ್ನೆಲೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುಲಾಗುತ್ತೆ ಎಂದು  ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಚಾಲಕರಿಂದ ಸರ್ಕಾರದ ವಿರುದ್ಧ ಅಭಿಯಾನ

Sun Apr 26 , 2020
ಕೊರೊನಾ ಹಿನ್ನಲೆ ಲಾಕ್‌ಡೌನ್‌ನಿಂದಾಗಿ ಚಾಲಕರು ಮನೆಯಲ್ಲಿಯೇ ಕೂರುವಂತಹ ಸ್ಥಿತಿ ಉಂಟಾಗಿದೆ. ಚಾಲಕ ವೃತ್ತಿಯನ್ನೇ ನಂಬಿಕೊಂಡಿದ್ದ ಚಾಲಕರು ತೀವ್ರ ತೊಂದರೆಗೆ ಒಳಗಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಸೆಲ್ಪಿ ವಿತ್ ಖಾಲಿ ತಪ್ಪಲೆ, ಖಾಲಿ ತಟ್ಟೆ ಅಭಿಯಾನ ಆರಂಭಿಸಿದ್ದಾರೆ.  ಲಾಕ್‌ಡೌನ್ ಜಾರಿಯಾಗಿ ಒಂದೂವರೆ ತಿಂಗಳು ಸಮೀಪಿಸುತ್ತಿದ್ದರೂ ಚಾಲಕರ ಸಂಕಷ್ಟಗಳಿಗೆ ಈವರೆಗೆ ಸ್ಪಂದಿಸದೆ ಸರ್ಕಾರಗಳು ನಿರ್ಲಕ್ಷö್ಯ ತೋರಿವೆ ಎಂದು ಸಮಗ್ರ ಚಾಲಕರ ಒಕ್ಕೂಟ ಬೃಹತ್ ಪ್ರತಿಭಟನೆ ಆರಂಭಿಸಿವೆ.  ಸಾರಿಗೆ […]

Advertisement

Wordpress Social Share Plugin powered by Ultimatelysocial