ಹೈದರಾಬಾದ್ ನ ಮೀನಾಕ್ಷಿ ಟವರ್ ನಲ್ಲಿ ಆಯೋಜಿಸಿದ್ದ ಪಾರ್ಟಿಯೊಂದರಲ್ಲಿ ಭಾಗವಹಿಸಿದ ಆಂಧ್ರ ಪ್ರದೇಶದ ಬಿಜೆಪಿ ಅಧ್ಯಕ್ಷರಾದ ಕನ್ನಾ ಲಕ್ಷ್ಮಿ ನಾರಾಯಣ್ ರವರ ಸೊಸೆ ಸುಹಾರಿಕ ರೆಡ್ಡಿ ಸುಮಾರು ಒಂದು ಗಂಟೆಯವರೆಗೆ ಕುಣಿದು ಕುಪ್ಪಳಿಸಿ ನಂತರ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿರುವುದು ಆತಂಕ ಅಲ್ಲದೇ ಸಾಕಷ್ಟು ಅನುಮಾನಗಳನ್ನು ಮೂಡಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಈ ಸಂಬಂಧ ಮಧುಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಹಾಗೂ ಪೊಲೀಸ್ ಮೂಲಗಳ ಪ್ರಕಾರ ಆಕೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಹೇಳಲಾಗಿದೆ.