ಪುನರ್ವಸತಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡ ಫಲಾನುಭವಿಗಳು

ಪುನರ್ವಸತಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡ ಫಲಾನುಭವಿಗಳಿಗೆ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಬಲ ನೀಡಿದ ಘಟನೆ  ದೇವದುರ್ಗದಲ್ಲಿ ನಡೆದಿದೆ. ಇಲ್ಲಿನ ಹೆಚ್ ಸಿದ್ದಾಪುರ ಗಾಮದ ಪುನರ್ವಸತಿ ಜಾಗದಲ್ಲಿ ಶೆಡ್ ನಿರ್ಮಾಣಿಸಿಕೊಂಡ ಫಲಾನುಭವಿಗಳಿಗೆ ರಕ್ಷಣೆ ನೀಡಲು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಿ ಎಸ್ ಐ ವಿರೂಪಾಕ್ಷ ಅವರಿಗೆ ಮನವಿ ನೀಡಿದ್ದಾರೆ. ಅವರ ಶೆಡ್ ಗಳನ್ನ    ತೆರವುಗೊಳಿಸಲು ಸ್ಥಳೀಯ ಅಧಿಕಾರಿಗಳು ಮುಂದಾಗಿದ್ದು, ಗ್ರಾಮಕ್ಕೆ ಶಾಲಾ ಕಟ್ಟಡ ಮಂಜೂರಾಗಿದೆ ಎಂದು ಅಲ್ಲಿ ವಾಸಿಸುತ್ತಿರುವ ಜನರನ್ನ ಎತ್ತಂಗಡಿ ಮಾಡಿಸಲು ತಯಾರಾಗಿದ್ದಾರೆ. ಗುತ್ತಿಗೆದಾರರು ಮತ್ತು ಕೆಲವು ವ್ಯಕ್ತಿಗಳು ಜಾಗವನ್ನು ಖಾಲಿ ಮಾಡಿ ಎಂದು ಬೆದರಿಕೆ ಹಾಕಿ, ಕಿರುಕುಳ ನೀಡುತ್ತಿದ್ದಾರೆ. ಇದರ ಜೊತೆಗೆ  ಅವ್ಯಾಚ ಶಬ್ದಗಳಿಂದ ಫಲಾನುಭವಿಗಳಿಗೆ ನಿಂದಿಸಿದ್ದಾರೆ . ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿಯ ಜನರ ರಕ್ಷಣೆಗೆ ಮುಂದಾಗಬೇಕು. ಅವರಿಗೆ ಸೂಕ್ತವಾದ ರಕ್ಷಣೆ ನೀಡಬೇಕು. ಒಂದು ವೇಳೆ ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದಾದ್ಯಂತ ಹೋರಾಟ ಮಾಡುತ್ತೆ ಎಂದು ಮನವಿ ಪತ್ರ ಮೂಲಕ ಎಚ್ಚರಿಕೆ ಕೊಟ್ಟಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಸೇತುವೆಗಳ ಮೇಲೆ  ಮಹನಿಯರ ಹೆಸರಗಳ ಬರವಣಿಗೆ

Thu Jun 4 , 2020
ಮಂಗಳೂರು : ಬೆಂಗಳೂರಿನ ಯಲಹಂಕ ಸೇತುವೆಗೆ ವೀರ್ ಸಾವರ್ಕರ್ ಹೆಸರಿಡುವ ವಿಚಾರ ವಿವಾದಕ್ಕೀಡಾಗಿತ್ತು. ಇದರ ಬೆನ್ನಲ್ಲೇ  ಕೇಸರಿ ಪಡೆಯ ಭದ್ರಕೋಟೆ ಅಂತಲೇ ಹೆಸರಾಗಿರುವ ಮಂಗಳೂರಿನ ಸೇತುವೆಗಳಲ್ಲಿ ಸಾವರ್ಕರ್ ಬ್ಯಾನರ್ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ ಮಂಗಳೂರಿನ ಪಂಪ್ವೆಲ್ ಫ್ಲೈಓವರ್ ಮೇಲೆ ಸಾವರ್ಕರ್ ಬ್ಯಾನರ್ ಪ್ರತ್ಯಕ್ಷವಾಗಿ ಫೋಟೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಒಂದೇ ಗಂಟೆಯಲ್ಲೇ ಫ್ಲೆಕ್ಸ್ ಕಾಣೆಯಾಗಿತ್ತು. ಈ ವಿಚಾರದಲ್ಲಿ ಪ್ರತಿಕ್ರಿಯಿಸಿದ್ದ ಮಾಜಿ ಸಚಿವ ಯು.ಟಿ ಖಾದರ್, ಪಂಪ್ವೆಲ್ ವೃತ್ತಕ್ಕೆ ಈ […]

Advertisement

Wordpress Social Share Plugin powered by Ultimatelysocial