ಬಾಕಿ ಇರುವ ಸಿಬಿಎಸ್‌ಇ ಪರೀಕ್ಷೆ ರದ್ದು

ಲಾಕ್‌ಡೌನ್ ಹಿನ್ನಲೆ ಮುಂದೂಡಿದ್ದ ಸಿಬಿಎಸ್‌ಇ ೧೦ನೇ ತರಗತಿಯ ಬಾಕಿ ವಿಷಯಗಳ ಪರೀಕ್ಷೆಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಈಶಾನ್ಯ ದೆಹಲಿ ಹೊರತುಪಡಿಸಿ ಇತರೆ ಯಾವುದೇ ರಾಜ್ಯದಲ್ಲಿ ಸಿಬಿಎಸ್‌ಇ ೧೦ನೇ ತರಗತಿಯ ಉಳಿದ ವಿಷಯಗಳ ಪರೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ರಮೇಶ್ ಪೋಖ್ರಿವಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ. ದೇಶಾದ್ಯಂತ ಈಗಾಗಲೇ ಸಿಬಿಎಸ್‌ಇ ೧೦ನೇ ತರಗತಿ ಪ್ರಮುಖ ಪತ್ರಿಕೆಗಳ ಪರೀಕ್ಷೆ ಪೂರ್ಣಗೊಂಡಿದೆ. ಬಾಕಿಯಿರುವ ಒಂದೆರಡು ವಿಷಯಗಳ ಪರೀಕ್ಷೆಗಳನ್ನು ನಡೆಸುವುದಿಲ್ಲ. ಆದ್ರೆ ಈಶಾನ್ಯ ದೆಹಲಿಯಲ್ಲಿ ಪೌರತ್ವ ವಿರೋಧಿ ಪ್ರತಿಭಟನೆ ಹಾಗೂ ಲಾಕ್‌ಡೌನ್‌ನಿಂದಾಗಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಹೀಗಾಗಿ ಅಲ್ಲಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ೧೦ದಿನಗಳ ಸಮಯಾವಕಾಶ ನೀಡೋದಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸ್ಪಷ್ಟಪಡಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಬಗರುಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ

Wed May 6 , 2020
ಅನೇಕ ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮ ಮಾಡಿಕೊಳ್ಳಲು ಬಗರುಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗುವುದು ಎಂದು  ಸಚಿವ ಆರ್. ಅಶೋಕ್  ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ  ಮಾತನಾಡಿದ  ಅವರು , ಭೂಸುಧಾರಣಾ ಕಾಯ್ದೆ ಅರ್ಜಿ ಸಲ್ಲಿಸಿದ ಅನೇಕ ರೈತರ ಅರ್ಜಿಗಳು ತಿರಸ್ಕೃತಗೊಂಡಿವೆ. ಅಂತಹ ರೈತರಿಗೆ ಅರ್ಜಿ ಸಲ್ಲಿಕೆಗೆ ಮತ್ತೊಂದು ಅವಕಾಶ ನೀಡಲಾಗುವುದು. ಇದರಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗುತ್ತದೆ. ಫಾರಂ ನಂಬರ್ 50, 53 […]

Advertisement

Wordpress Social Share Plugin powered by Ultimatelysocial