ಬಿಜೆಪಿ ನಾಯಕರ ಸಂದೇಶ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ನಾಯಕರು ಒಂದು ಸಂದೇಶ ಕಳಿಸಿದ್ದಾರೆ ಎಂದು ರಾಜ್ಯಸಭಾ ಟಿಕೆಟ್​ ವಂಚಿತ ರಮೇಶ್ ಕತ್ತಿ ಇಂದು ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಎರಡು ರಾಜ್ಯಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಿದ್ದಾರೆ. ಇದರಿಂದ ನನಗೆ ತುಂಬಾ ಸಂತೋಷವಾಗಿದ್ದು, ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿದ್ದೇವೆ ಎಂಬ ಸ್ಪಷ್ಟ ಸಂದೇಶ ಹೈಕಮಾಂಡ್ ಕಳಿಸಿದೆ ಎಂದು ತಿಳಿಸಿದರು. ನಾನೂ ಕೂಡ ರಾಜ್ಯಸಭಾ ಟಿಕೆಟ್​ ಅಪೇಕ್ಷಿತನಾಗಿದ್ದೆ. ಪಕ್ಷಕ್ಕೆ ದುಡಿದ ನಮ್ಮ ಜಿಲ್ಲೆಯಯವರನ್ನೇ ಗುರುತಿಸಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಅಭ್ಯರ್ಥಿಗಳಾಗಿ ಆಯ್ಕೆಯಾದ ಇಬ್ಬರಿಗೂ ಅಭಿನಂದನೆಗಳು ಎಂದು ಹೇಳಿದರು. ಸದ್ಯ ನಾವು ಇಬ್ಬರಿಗೂ ಸಹಕಾರ ಕೊಡುತ್ತೇನೆ. ಯಾವಾಗಲೂ ಅವರ ಜೊತೆ ಇರ್ತೇವೆ. ರಾಜ್ಯದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರು ಕೆಲಸ ಮಾಡಲಿ ಎಂದು ಟಿಕೆಟ್​ ವಂಚಿತ ರಮೇಶ್ ಕತ್ತಿರ ಅವರು ಬಿಜೆಪಿ ಹೈಕಮಾಂಡ್​ ನಿರ್ಧಾರಕ್ಕೆ ಸ್ವಾಗತಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯಸಭಾ ಚುನಾವಣೆ, ನಾಮಪತ್ರ ಸಲ್ಲಿಸಿದ ಖರ್ಗೆ

Mon Jun 8 , 2020
ಜೂನ್‌ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜನ ಖರ್ಗೆ  ಇಂದು  ನಾಮಪತ್ರ ಸಲ್ಲಿಸಿದರು. ವಿಧಾನಸಭಾ ಕಾರ್ಯದರ್ಶಿಗಳೂ ಆದ ಚುನಾವಣಾಧಿಕಾರಿ ಎಂ ಕೆ ವಿಶಾಲಾಕ್ಷಿ ಅವರಿಗೆ ನಾಮಪತ್ರವನ್ನು ಖರ್ಗೆ ಸಲ್ಲಿಸಿದರು‌. ಮುಖಂಡರ ಜೊತೆಗೆ ಖರ್ಗೆ ಚರ್ಚೆಯನ್ನು ನಡೆಸಿದರು. ಇದಾದ ಬಳಿಕ ನಾಮಪತ್ರವನ್ನು ಸಲ್ಲಿಸಿದರು. ಈ ವೇಳೆ ರಾಜ್ಯ ವಿಧಾನ ಸಭೆಯಲ್ಲಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್, ಹಿರಿಯ […]

Advertisement

Wordpress Social Share Plugin powered by Ultimatelysocial