ಬ್ಯಾಂಕುಗಳು ಅಸಂಘಟಿತ ವೃತ್ತಿಪರರಿಗೆ ಕಿರುಕುಳ ನೀಡುತ್ತಿವೆ:ಡಿ.ಕೆ.ಶಿ

ಬ್ಯಾಂಕುಗಳು ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ಸಾಲ ವಸೂಲಿ ಹೆಸರಲ್ಲಿ ಅಸಂಘಟಿತ ವೃತ್ತಿಪರರಿಗೆ ಕಿರುಕುಳ ನೀಡುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಆರ್.ಬಿ.ಐ ನಿಂದಾಗಲಿ ಅಥವಾ ಕೇಂದ್ರ ಸರ್ಕಾರದಿಂದಾಗಲಿ ಯಾವುದೇ ನಿರ್ದೇಶನಗಳು ಬ್ಯಾಂಕುಗಳಿಗೆ ರವಾನೆಯಾಗಿಲ್ಲ. ಕಾನೂನಿನ ವ್ಯಾಪ್ತಿಯಲ್ಲೇ ಈ ವರ್ಗದ ಜನರಿಗೆ ನೆರವು ನೀಡಬೇಕು.ಅಸಂಘಟಿತ ವೃತ್ತಿಪರರ ಪರವಾಗಿ ನಿರಂತರವಾಗಿ ಮಾತನಾಡುತ್ತಾ ಬಂದಿರುವ ಶಿವಕುಮಾರ್ ಈ ಸಂಬಂಧ ಈ ಹಿಂದೆಯೂ ಸುದ್ದಿಗೋಷ್ಟಿ ನಡೆಸಿ ಸರ್ಕಾರ ಇವರ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡಿದ್ದರು. ಅಲ್ಲದೆ ಪಕ್ಷದ ಹಿರಿಯ ನಾಯಕರ ಜೊತೆ ತೆರಳಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಇಂತಹ ವೃತ್ತಿಪರರನ್ನು ಗುರುತಿಸಿ ಮಾರ್ಚ್-ಏಪ್ರಿಲ್ ತಿಂಗಳು ಜೀವನ ನಿರ್ವಹಣೆಗಾಗಿ ತಲಾ 10 ಸಾವಿರ ರೂಪಾಯಿ ನೀಡಬೇಕು ಎಂದು ಮನವಿ ಮಾಡಿದರು.

Please follow and like us:

Leave a Reply

Your email address will not be published. Required fields are marked *

Next Post

ಮೇ5ರವರೆಗೆ ಕ್ವಾರಂಟೈನ್ ನಲ್ಲಿರುತ್ತೇನೆ: ಸುಧಾಕರ್

Thu Apr 30 , 2020
ಬೆಂಗಳೂರು : ನಾನು ಆರೋಗ್ಯವಾಗಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.ಬೆಂಗತಳೂರಿನಲ್ಲಿ ಮಾತನಾಡಿದ ಅವರು,ಸೋಂಕಿತ ಪತ್ರಕರ್ತನೊಂದಿಗೆ ಸಂಪರ್ಕದಲ್ಲಿದ್ದ ಹಿನ್ನಲೆ ಕರ್ನಾಟಕದ ನಾಲ್ವರು ಸಚಿವರನ್ನು ಹೋಂ ಕ್ವಾರಂಟೈನನಲ್ಲಿಡಲಾಗಿದೆ. ಅವರಲ್ಲಿ ವೈದ್ಯ ಶಿಕ್ಷಣ ಸಚಿವ ಡಾ.ಸುಧಾಕರ್ ಕೂಡ ಒಬ್ಬರು. ಇದೀಗ ಅವರು ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ನಾನು ಆರೋಗ್ಯವಾಗಿದ್ದೇನೆ . ಸಂಪುಟ ಸಭೆಗೆ ಹೋಗದಿರಲು ನಿರ್ಧಾರ ಮಾಡಿದ್ದೇನೆ. ಮೇ5ರವರೆಗೆ ಕ್ವಾರಂಟೈನ್ ನಲ್ಲಿರುತ್ತೇನೆ. ಇಂದು ಮತ್ತೊಮ್ಮೆ ಆರೋಗ್ಯ ತಪಾಸಣೆ ಮಾಡಿಸುತ್ತೇನೆ. […]

Advertisement

Wordpress Social Share Plugin powered by Ultimatelysocial