ಬ್ರಾಹ್ಮಣ ಸಂಘದ ನೂತನ ಕಛೇರಿ ಉದ್ಘಾಟನೆ

ಇಂದು ಬ್ರಾಹ್ಮಣ ಅಭಿವೃದ್ಧಿ ಸಂಘದ ನೂತನ ಕಛೇರಿಯನ್ನು ಉದ್ಘಾಟಿಸಲಾಯಿತು. ಗೃಹ ಕಛೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಾಮಾಜಿಕ ಜಾಲತಾಣಲ್ಲಿ ಉದ್ಘಾಟನೆ ಮಾಡಿದರು.ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಎಲ್ಲಾ ಸಮುದಾಯದಲ್ಲೂ ಹಿಂದುಳಿದವರು ಹಾಗೂ ಮುಂದುವರೆದವರು ಇದ್ದಾರೆ. ಪಾರಂಪರಿಕವಾಗಿ ಬ್ರಾಹ್ಮಣ ಸಮುದಾಯವನ್ನು ಮುಂದುವರೆದ ಸಮುದಾಯವೆಂದು ಗುರಿತಿಸಲ್ಪಟ್ಟಿದೆ. ಆದರೆ ಆರ್ಥಿಕವಾಗಿ ಅಶಕ್ತವಾಗಿರುವವರು ಹಲವರು ಇದ್ದಾರೆ. ಅಂತಹವರ ಅಭ್ಯುದಯಕ್ಕಾಗಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಆರಂಭಿಸಲಾಗಿದೆ. ಶಿಕ್ಷಣ,ಪರಂಪರೆ,ಸಂಸ್ಕೃತಿ ವಿಚಾರದಲ್ಲಿ ದೇಶದ ಹಿತಿಹಾಸದಲ್ಲಿ ಬ್ರಾಹ್ಮಣ ಸಮುದಾಯದ ಕೊಡುಗೆ ಉಲ್ಲೇಖಾರ್ಹ, ಹಣ,ಆಸ್ತಿಗಿಂತ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿದ್ದಾರೆ. ಸಂಸ್ಕೃತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

 

Please follow and like us:

Leave a Reply

Your email address will not be published. Required fields are marked *

Next Post

ಡ್ರೈವರ್,ಕಂಡಕ್ಟರ್ ಬಚಾವ್

Wed Jun 10 , 2020
ಪುತ್ತೂರಿನಿಂದ ಈಶ್ವರಮಂಗಲ ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್ಸೊಂದು ಈಶ್ವರಮಂಗಲದ ಸಮೀಪ ಸಾಂತ್ಯ ಸಮೀಪದ ತಿರುವಿನಲ್ಲಿ ಚಾಲPನÀ ನಿಯಂತ್ರಣ ತಪ್ಪಿ ಮನೆಯ ಮೇಲ್ಚಾವಣಿ ಮೇಲೆ ಬಿದ್ದ ಘಟನೆÀ ಇಂದು ನಡೆದಿದೆ. ಘಟನೆಯಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಸ್ವಲ್ಪ ಗಾಯವಾಗಿದೆ, ಉಳಿದಂತೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಸುಮಾರು ೨೦ ಅಡಿಯಷ್ಟು ಕೆಳಗೆ ಇರುವ ಮನೆಯ ಕೊಟ್ಟಿಗೆಯ ಛಾವಣಿಯ ಮೇಲೆ ಬಸ್ಸು ಉರುಳಿ ಬಿದ್ದಿದೆ. ಬಸ್ ಉರುಳಿ ಬಿದ್ದ ಸಮಯದಲ್ಲಿ ಮನೆಯವರು […]

Advertisement

Wordpress Social Share Plugin powered by Ultimatelysocial