ಇಂದು ಬ್ರಾಹ್ಮಣ ಅಭಿವೃದ್ಧಿ ಸಂಘದ ನೂತನ ಕಛೇರಿಯನ್ನು ಉದ್ಘಾಟಿಸಲಾಯಿತು. ಗೃಹ ಕಛೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಾಮಾಜಿಕ ಜಾಲತಾಣಲ್ಲಿ ಉದ್ಘಾಟನೆ ಮಾಡಿದರು.ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಎಲ್ಲಾ ಸಮುದಾಯದಲ್ಲೂ ಹಿಂದುಳಿದವರು ಹಾಗೂ ಮುಂದುವರೆದವರು ಇದ್ದಾರೆ. ಪಾರಂಪರಿಕವಾಗಿ ಬ್ರಾಹ್ಮಣ ಸಮುದಾಯವನ್ನು ಮುಂದುವರೆದ ಸಮುದಾಯವೆಂದು ಗುರಿತಿಸಲ್ಪಟ್ಟಿದೆ. ಆದರೆ ಆರ್ಥಿಕವಾಗಿ ಅಶಕ್ತವಾಗಿರುವವರು ಹಲವರು ಇದ್ದಾರೆ. ಅಂತಹವರ ಅಭ್ಯುದಯಕ್ಕಾಗಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಆರಂಭಿಸಲಾಗಿದೆ. ಶಿಕ್ಷಣ,ಪರಂಪರೆ,ಸಂಸ್ಕೃತಿ ವಿಚಾರದಲ್ಲಿ ದೇಶದ ಹಿತಿಹಾಸದಲ್ಲಿ ಬ್ರಾಹ್ಮಣ ಸಮುದಾಯದ ಕೊಡುಗೆ ಉಲ್ಲೇಖಾರ್ಹ, ಹಣ,ಆಸ್ತಿಗಿಂತ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿದ್ದಾರೆ. ಸಂಸ್ಕೃತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.