ಮಂಗಳೂರಿಗೆ ಬರುವ ಮೀನು ವಾಹನಗಳಿಗೆ ತಕ್ಷಣವೇ ನಿರ್ಬಂಧ: ಶ್ರೀನಿವಾಸ ಪೂಜಾರಿ

ಮಂಗಳೂರು: ಮಂಗಳೂರಿನ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರದ ಸಮಸ್ಯೆ ಇರುವುದರಿಂದ ಮತ್ತು ಕೊರೋ‌ನದ ಗಂಭೀರ ಸಮಸ್ಯೆ ಇರುವುದರಿಂದ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ‌ಮೀನು ವಾಹನಗಳಿಗೆ ತಕ್ಷಣವೇ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮೀನುಗಾರಿಕೆ ಆರಂಭಗೊಂಡಿದ್ದು, ಜಿಲ್ಲೆಯ ಜನರಿಗೆ ಮೀನುಗಳನ್ನು ಪೂರೈಸಲಾಗುತ್ತಿದೆ. ಆದರೆ ಬೇರೆ ಹೊರ ರಾಜ್ಯದಿಂದ ಮೀನುಗಳನ್ನು ತರುವುದಕ್ಕೆ ಸದ್ಯಕ್ಕೆ ನಿಷೇಧ ಹೇರಲಾಗಿದೆ. ಸಾಮಾನ್ಯ ದಿನಗಳಲ್ಲಿ ಮಂಗಳೂರಿಗೆ ಹೆಚ್ಚಾಗಿ ಕೇರಳದಿಂದ ಮೀನುಗಳು ಬರುತ್ತಿದ್ದವು.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಸರ್ಕಾರಕ್ಕೆ ಐಸಿಎಮ್‌ಆರ್ ಸೂಚನೆ

Mon Apr 27 , 2020
ಕೊರೊನಾ ಪರೀಕ್ಷೆಗಾಗಿ ಚೀನಾದಿಂದ ಭಾರತಕ್ಕೆ ಬಂದ ವೈದ್ಯಕೀಯ ಸಲಕರಣೆಗಳು ನಕಲಿಯಾದವು, ಮತ್ತು ಅವುಗಳು ರೋಗ ಪರೀಕ್ಷೆಯಲ್ಲಿ ನಂಬಲರ್ಹವಾದ ಫಲಿತಾಂಶವನ್ನು ತೋರಿಸುತ್ತಿಲ್ಲ ಎನ್ನುವ ಆರೋಪಗಳು ಕೇಳಿಬರುತ್ತಿದ್ದವು. ಇದನ್ನ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಕೂಡ ಗಂಭೀರವಾಗಿ ಪರಿಗಣಿಸಿ ಚೀನಾದಿಂದ ಬಂದ ಪರೀಕ್ಷಾ ಸಾಧನಗಳು ಬಳಕೆಗೆ ಯೋಗ್ಯವೋ ಅಲ್ಲವೋ ಎನ್ನುವ ಬಗ್ಗೆ ಪರೀಕ್ಷೆಗಳನ್ನು ನಡೆಸುತ್ತಲೇ ಇತ್ತು. ಇದೀಗ   ICMR ರಾಜ್ಯ ಸರ್ಕಾರಗಳಿಗೆ ಆ್ಯಂಟಿ ಬಾಡಿ ಬ್ಲಡ್ ಟೆಸ್ಟ್ಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಹೊರಡಿಸಿದ್ದು  […]

Advertisement

Wordpress Social Share Plugin powered by Ultimatelysocial