ಮದ್ಯದಂಗಡಿ ಬಂದ್ ಮಾಡಲು ಮದ್ರಾಸ್ ಹೈಕೋರ್ಟ್ ಸೂಚನೆ

ಚೆನ್ನೈ: ಮದ್ಯದಂಗಡಿ ತೆರೆದುದರಿಂದ ಹಲವಾರು ಸಮಸ್ಯೆಗಳು ಉಂಟಾದ ಪರಿಣಾಮ, ಮದ್ಯದ ಅಂಗಡಿಗಳನ್ನು ಬಂದ್ ಗೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಲಾಕ್ ಡೌನ್ ಗೆ ವಿನಾಯಿತಿ ನೀಡಿ ಮದ್ಯದಂಗಡಿ ತೆರೆಯಲು ಅನುವು ಮಾಡಿಕೊಟ್ಟ ಬೆನ್ನಲ್ಲೇ ಹಲವು ಸಮಸ್ಯೆ ಉಂಟಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಮದ್ರಾಸ್ ಹೈಕೋರ್ಟ್ ಮದ್ಯದಂಗಡಿಗಳನ್ನು ಬಂದ್ ಮಾಡಿ ಹೋಮ್ ಡೆಲಿವರಿ, ಆನ್ ಲೈನ್ ಮಾರಾಟಕ್ಕೆ ಸಲಹೆ ನೀಡಿತ್ತು.
ಇದೀಗ ಹೈಕೋರ್ಟ್ ನಿರ್ಧಾರದ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಅಲ್ಲದೆ ಕೂಡಲೇ ತಮ್ಮ ಅರ್ಜಿಯನ್ನು ತುರ್ತು ವಿಚಾರಣೆಗೆ ತಂದು ಪರಿಶೀಲಿಸಬೇಕು ಎಂದು ಮನವಿ ಮಾಡಿರುವ ಸರ್ಕಾರ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದೆ.

Please follow and like us:

Leave a Reply

Your email address will not be published. Required fields are marked *

Next Post

ಕೋವಿಡ್-೧೯ ಪ್ರಯೋಗಾಲಯ ಉದ್ಘಾಟನೆ

Sat May 9 , 2020
ದಾವಣಗೆರೆ : ಕೋವಿಡ್-19 ರೋಗದ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆ ಸಾರ್ವಜನಿಕರು ಕೂಡ ಕೈಜೋಡಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪರಾಮರ್ಶೆ ಸಭೆಯಲ್ಲಿ ಮಾತನಾಡಿದ ಸಚಿವರು, ಇದುವರೆಗೂ ರಾಜ್ಯ ಸರ್ಕಾರ ಅತ್ಯಂತ ಜವಾಬ್ದಾರಿಯುತವಾಗಿ ಕರೋನಾ ಸೋಂಕನ್ನು ಹಿಮ್ಮೆಟ್ಟಿಸಿದೆ. ಲಾಕ್ ಡೌನ್ ಸಡಿಲಿಕೆ ಬಳಿಕ ಜನರು ಕೂಡ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ ಎಂದರು. ರಾಜ್ಯ ಸರ್ಕಾರ ಜನರ ಜೀವ ಮತ್ತು […]

Advertisement

Wordpress Social Share Plugin powered by Ultimatelysocial