ಲಾಕ್ಡೌನ್ ಹಿನ್ನೆಲೆ ಮದ್ಯ ಮಾರಾಟ 48 ದಿನಗಳಿಂದ ನಿಂತಿದೆ. ಅಮಲು ಮುಕ್ತ ಸಮಾಜದತ್ತ ಅರಿವಿಲ್ಲದೆ ದಾಪುಗಾಲಿಡುತ್ತಿದ್ವೆದೇವೆ ಎಂದು ಮಾಜಿ ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಜನರ ಸಂಕಷ್ಟ ಕುರಿತು ಸಿಎಂಗೆ ಪತ್ರ ಬರೆದ ಅವರು, ಇದೇ ಅವಕಾಶ ಬಳಸಿ ರಾಜ್ಯದಲ್ಲಿ ಪೂರ್ಣ ಮದ್ಯಪಾನ ನಿಷೇಧ ಜಾರಿಗೆ ತನ್ನಿ. ಮದ್ಯಪಾನವನ್ನು ಚಟವಾಗಿ ಮಾಡಿಕೊಂಡವರು ಸ್ವಲ್ಪ ದಿನ ಕಷ್ಟಪಟ್ಟರೂ ಇದೀಗ ಸಾರಾಯಿ ಇಲ್ಲದೆ ಬದುಕುತ್ತಿದ್ದಾರೆ. ಅಮಲು ಮುಕ್ತ ಸಮಾಜದತ್ತ ಅರಿವಿಲ್ಲದೆ ದಾಪುಗಾಲಿಡುತ್ತಿದ್ದು, ಇದರಿಂದ ಅನೇಕ ಲಾಭಗಳಾಗುತ್ತಿವೆ. ಮದ್ಯಪಾನದಿಂದ ಆಲಸ್ಯ, ಅಧಿಕಾರ ದುರುಪಯೋಗ, ಜಗಳ, ಭ್ರಷ್ಟಾಚಾರ, ಅಶಾಂತಿ ವಾತಾವರಣ ಸೃಷ್ಟಿಯಾಗುತ್ತದೆ. ಇದನ್ನು ನಿಷೇಧಿಸುವುದು ಅತ್ಯವಶ್ಯಕ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಮದ್ಯಪಾನ ನಿಷೇಧದಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗುತ್ತದೆ ಎಂದು ಹಲವರು ವಾದಿಸುತ್ತಾರೆ. ಆದರೆ, ಮದ್ಯಪಾನ ನಿಷೇಧದಿಂದ ಕೌಟುಂಬಿಕ ನೆಮ್ಮದಿ ಹೆಚ್ಚಿ, ಮಕ್ಕಳು ಉತ್ತಮ ಸಂಸ್ಕಾರ ಪಡೆಯುತ್ತಾರೆ, ಮಹಿಳೆಯರ ಶೋಷಣೆ ತಪ್ಪುತ್ತದೆ. ಈ ಶಾಂತಿ, ನೆಮ್ಮದಿಯು ಹಣ ಕೊಟ್ಟರೂ ಬರುವುದಿಲ್ಲ ಎಂಬುದನ್ನು ತಾವೂ ಒಪ್ಪುತ್ತೀರಿ. ಮದ್ಯಪಾನ ನಿಷೇಧ ಕಠಿಣ ಕೆಲಸ. ಆದರೆ, ಶ್ರೇಷ್ಠ ಕೆಲಸ. ಪ್ರಕೃತಿ ಸೃಷ್ಟಿಸಿರುವ ಈ ಪರಿಸ್ಥಿತಿಯ ಪ್ರಯೋಜನ ಪಡೆದು ದೃಢ ಸಂಕಲ್ಪದಿಂದ ಮದ್ಯಪಾನ ನಿಷೇಧಿಸಿ ಎಂದು ಸಿಎಂಗೆ ಪತ್ರದ ಮುಖಾಂತರ ಒತ್ತಾಯಿಸಿದ್ದಾರೆ.
ಮದ್ಯಪಾನ ನಿಷೇಧಿಸುವುದು ಅತ್ಯವಶ್ಯಕ :ಹೆಚ್ ಕೆ ಪಾಟೀಲ್
Please follow and like us: