ಮಹಾರಾಷ್ಟ್ರದಲ್ಲಿ ಎಲ್ಲರಿಗೂ ಉಚಿತ ಆರೋಗ್ಯ ವಿಮೆ..!

ಮಹಾರಾಷ್ಟ್ರ: ದೇಶದಲ್ಲಿ ಡೆಡ್ಲಿ ವೈರಸ್ ಕೊರೊನಾ ಆರ್ಭಟ ಜೋರಾಗಿದೆ. ಅತಿ ಹೆಚ್ಚು ಪ್ರಕರಣ ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಿವೆ. ಇದರ ಮಧ್ಯೆ ಅಲ್ಲಿನ ಸರ್ಕಾರ ಮಹತ್ವದ ಆದೇಶ ಹೊರಹಾಕಿದೆ.
ರಾಜ್ಯದಲ್ಲಿನ ಎಲ್ಲರಿಗೂ ಉಚಿತ ಆರೋಗ್ಯ ವಿಮೆ ಮಾಡಿಸಲು ನಿರ್ಧಾರ ಕೈಗೊಂಡಿರುವ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ, ಮಹಾತ್ಮ ಜ್ಯೋತಿಬಾ ಪುಲೆ ಜನ್ ಆರೋಗ್ಯ ಯೋಜನೆ ಅಡಿ ಎಲ್ಲರಿಗೂ ಉಚಿತವಾಗಿ ಚಿಕಿತ್ಸೆ ನೀಡಲು ಮುಂದಾಗಿದೆ. ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಈ ರೀತಿಯ ಯೋಜನೆ ಜಾರಿ ಮಾಡಿರುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಇದೀಗ ಮಹಾರಾಷ್ಟ್ರ ಪಾತ್ರವಾಗಿದೆ. ಇದರ ಬಗ್ಗೆ ಮಾತನಾಡಿರುವ ರಾಜ್ಯ ಆರೋಗ್ಯ ಸಚಿವ ರಾಜೇಶ್ ಥಾಪೆ, ಈಗಾಗಲೇ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕೋವಿಡ್-೧೯ ಸೋಂಕಿತರಿಗೂ ಇದು ಅನ್ವಯವಾಗಲಿದೆ ಎಂದಿದ್ದಾರೆ. ಈಗಾಗಲೇ ರಾಜ್ಯದ ೪೯೬ ಆಸ್ಪತ್ರೆಗಳು ಈ ಯೋಜನೆಯಡಿ ಚಿಕಿತ್ಸೆ ನೀಡುತ್ತಿದ್ದು, ಇದೀಗ ೧,೦೦೦ ಆಸ್ಪತ್ರೆಗಳಲ್ಲಿ ಜನರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಮೊಬೈಲ್ ಬಳಸಿ ಟ್ರೋಲ್ ಆದ ಆಲಿಯಾ ಭಟ್..!

Sat May 2 , 2020
ನಟ ರಿಶಿ ಕಪೂರ್ ಅಂತಿಮ ವಿಧಿ ವಿಧಾನಗಳು ಕುಟುಂಬದ ಸಮ್ಮುಖದಲ್ಲಿ ನೇರವೇರಿತು. ರಣಬೀರ್ ಗರ್ಲ್ಫ್ರೆಂಡ್ ಆಗಿರುವ ಆಲಿಯಾ ಭಟ್ ಸಹ ಅಂತಿಮ ವಿಧಿ ವಿಧಾನದಲ್ಲಿ ಭಾಗಿಯಾಗಿದ್ದರು.   ಅಂತಿಮ ವಿಧಿ ವಿಧಾನ ನಡೆಯುವಾಗ ಆಲಿಯಾ ಭಟ್ ತಮ್ಮ ಮೊಬೈಲ್ ಫೋನ್ ಹಿಡಿದು ನಿಂತಿದ್ದ ಚಿತ್ರ ಭಾರಿ ವೈರಲ್ ಆಗಿತ್ತು. ಆಲಿಯಾ ಮೊಬೈಲ್ ಬಳಸುತ್ತಿದ್ದುದು ರಿಶಿ ಕಪೂರ್‌ಗೆ ಮಾಡಿದ ಅವಮಾನ ಎಂದು ನೆಟ್ಟಿಗರು ಆಲಿಯಾ ಭಟ್‌ನನ್ನು ಟ್ರೋಲ್ ಮಾಡಿದ್ದಾರೆ. ಇನ್ನೊಂದೆಡೆ ಆಲಿಯಾ ಕಪೂರ್ […]

Advertisement

Wordpress Social Share Plugin powered by Ultimatelysocial