ಮಹಾರಾಷ್ಟ್ರ: ದೇಶದಲ್ಲಿ ಡೆಡ್ಲಿ ವೈರಸ್ ಕೊರೊನಾ ಆರ್ಭಟ ಜೋರಾಗಿದೆ. ಅತಿ ಹೆಚ್ಚು ಪ್ರಕರಣ ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಿವೆ. ಇದರ ಮಧ್ಯೆ ಅಲ್ಲಿನ ಸರ್ಕಾರ ಮಹತ್ವದ ಆದೇಶ ಹೊರಹಾಕಿದೆ.
ರಾಜ್ಯದಲ್ಲಿನ ಎಲ್ಲರಿಗೂ ಉಚಿತ ಆರೋಗ್ಯ ವಿಮೆ ಮಾಡಿಸಲು ನಿರ್ಧಾರ ಕೈಗೊಂಡಿರುವ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ, ಮಹಾತ್ಮ ಜ್ಯೋತಿಬಾ ಪುಲೆ ಜನ್ ಆರೋಗ್ಯ ಯೋಜನೆ ಅಡಿ ಎಲ್ಲರಿಗೂ ಉಚಿತವಾಗಿ ಚಿಕಿತ್ಸೆ ನೀಡಲು ಮುಂದಾಗಿದೆ. ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಈ ರೀತಿಯ ಯೋಜನೆ ಜಾರಿ ಮಾಡಿರುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಇದೀಗ ಮಹಾರಾಷ್ಟ್ರ ಪಾತ್ರವಾಗಿದೆ. ಇದರ ಬಗ್ಗೆ ಮಾತನಾಡಿರುವ ರಾಜ್ಯ ಆರೋಗ್ಯ ಸಚಿವ ರಾಜೇಶ್ ಥಾಪೆ, ಈಗಾಗಲೇ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕೋವಿಡ್-೧೯ ಸೋಂಕಿತರಿಗೂ ಇದು ಅನ್ವಯವಾಗಲಿದೆ ಎಂದಿದ್ದಾರೆ. ಈಗಾಗಲೇ ರಾಜ್ಯದ ೪೯೬ ಆಸ್ಪತ್ರೆಗಳು ಈ ಯೋಜನೆಯಡಿ ಚಿಕಿತ್ಸೆ ನೀಡುತ್ತಿದ್ದು, ಇದೀಗ ೧,೦೦೦ ಆಸ್ಪತ್ರೆಗಳಲ್ಲಿ ಜನರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಎಲ್ಲರಿಗೂ ಉಚಿತ ಆರೋಗ್ಯ ವಿಮೆ..!
Please follow and like us: