ಮಾಜಿ ಕ್ರಿಕೆಟಿಗ ಥಾಂಪಿ ಕೊಲೆ

೬ ಪ್ರಥಮ ದರ್ಜೆ ಕ್ರಿಕೆಟಿನಲ್ಲಿ ಕೇರಳ ತಂಡವನ್ನು ಪ್ರತಿನಿಧಿಸಿದ್ದ ಜಯಮೋಹನ್ ಥಾಂಪಿ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್ಮನ್ ಎಂದೇ ಗುರುತಿಸಿಕೊಂಡಿದ್ದರು. ಆದರೆ ೬೪ ವರ್ಷದ ಮಾಜಿ ಕ್ರಿಕೆಟಿಗ ಜಯಮೋಹನ್ ಅವರು ಮೂಲತಃ ಮನಕಾಡ್ನವರು, ಸ್ವತಃ ಅವರ ಮಗನೇ ಅವರನ್ನು ಬಲವಾಗಿ ತಳ್ಳಿದ ಕಾರಣ ಹಣೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಥಾಂಪಿ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಅವರದ್ದೇ ಮನೆಯಲ್ಲಿ ಸೋಮವಾರ ಪತ್ತೆಯಾಗಿದೆ, ಆದ್ದರಿಂದ ಸದ್ಯಕ್ಕೆ ಕೊಲೆ ಆರೋಪದಲ್ಲಿ ಮಗನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ, ಶವ ಕೊಳೆತು ವಾಸನೆ ಬರುತ್ತಿದ್ದರೂ ಮಗ ಸುಮ್ಮನೆ ಇದ್ದುದರಿಂದ ಅನುಮಾನಗೊಂಡ ಪೊಲೀಸರು ಮಗನನ್ನು ವಿಚಾರಿಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಹಾಗೆಯೇ ಎರಡು ದಿನಗಳ ಹಿಂದೆಯೇ ಥಾಂಪಿ ಅವರು ಸಾವಿಗೀಡಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ, ಹಾಗೂ ಸಹಾಯ ಮಾಡಿದ ಕಾರಣಕ್ಕೆ ನೆರೆಮನೆಯ ಯುವಕನನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡುವುದಿಲ್ಲ

Wed Jun 10 , 2020
ಕೆಲವು ರಾಜ್ಯಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ಧು ಮಾಡಿರುವಂತೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಒಂದು ಗಂಟೆ ಮುಂಚಿತವಾಗಿಯೇ ಬರಲು ವ್ಯವಸ್ಥೆ ಮಾಡಲಾಗುವುದು. ಎಲ್ಲಾ ವಿದ್ಯಾರ್ಥಿಗಳಿಗೆ ತಪ್ಪದೇ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಅಲ್ಲದೆ ಸ್ಯಾನಿಟೈಸರ್ ಕೂಡ ಮಾಡಲಾಗುವುದು. ಅದಕ್ಕಾಗಿ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯಿಂದ ವಿಶೇಷ […]

Advertisement

Wordpress Social Share Plugin powered by Ultimatelysocial