ಕೋವಿಡ್-19 ಹಿನ್ನೆಲೆ ನಾಗರೀಕರಿಗೆ ಅಗತ್ಯ ಸೇವೆಗಳನ್ನು ಮನೆಗಳಿಗೆ ತಲುಪಿಸುವ ಉದ್ದೇಶದಿಂದ ನಗರಾದ್ಯಂತ “ಹೋಮ್ ಡಿಲಿವೆರಿ ಸಹಾಯವಾಣಿ”ಗೆ ಸನ್ಮಾನ್ಯ ಮುಖ್ಯಮಂತ್ರಿಗಳು, ಪೂಜ್ಯ ಮಹಾಪೌರರು ಮುಖ್ಯಮಂತ್ರಿ ರವರ ಗೃಹ ಕಛೇರಿ ಕೃಷ್ಣದಲ್ಲಿ ಚಾಲನೆ ನೀಡಿದರು. ಈ ವೇಳೆ ಉಪಮುಖ್ಯಮಂತ್ರಿಗಳು ಡಾ. ಸಿ.ಎನ್.ಅಶ್ವತ್ಥ ನಾರಾಯಣ್, ಸಂಸದರಾದ ಶ್ರೀ ಪಿ.ಸಿ.ಮೋಹನ್, ಶ್ರೀ ತೇಜಸ್ವಿ ಸೂರ್ಯ, ಕಂದಾಯ ಸಚಿವರು ಶ್ರೀ ಆರ್.ಅಶೋಕ್, ರಾಜ್ಯ ಸಭಾ ಸದಸ್ಯರು ರಾಜೀವ್ ಚಂದ್ರಶೇಖರ್, ಉಪಮಹಾಪೌರರು ಶ್ರೀ ರಾಮಮೋಹನ ರಾಜು, ಆಡಳಿತ ಪಕ್ಷದ ನಾಯಕರು ಶ್ರೀ ಮುನೀಂದ್ರ ಕುಮಾರ್, ಆಯುಕ್ತರು ಶ್ರೀ ಬಿ.ಹೆಚ್.ಅನಿಲ್ ಕುಮಾರ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.