ಪಾದರಾಯನಪುರದಲ್ಲಿ ವೈದ್ಯಕೀಯ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ದ ದೌರ್ಜನ್ಯ ನಡೆಸುವ ಪ್ರಯತ್ನ ಮಾಡಿದವರನ್ನು ಮುಲಾಜಿಲ್ಲದೆ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂತಹವರ ನಿಯಂತ್ರಿಸದಿದ್ದರೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಈ ರೀತಿ ಪುಂಡಾಟ ಮಾಡಿದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಗೃಹ ಸಚಿವರು ಇಂತಹವರನ್ನು ಮಟ್ಟ ಹಾಕಬೇಕು ಎಂದು ಒತ್ತಾಯ ಮಾಡಿದ್ದೇನೆ. ಇಂತ ಜನರಿಗೆ ಸಂಯಮದ ಪಾಠ ಅಗತ್ಯವಿಲ್ಲ. ಅವರಿಗೆ ಅರ್ಥವಾಗುವ ಭಾಷೆಯಲ್ಲಿ ಉತ್ತರ ನೀಡಬೇಕುಆಹಾರದಲ್ಲಿ ವ್ಯತ್ಯಯ ಆಗುತ್ತಿದ್ದು. ಇದರಿಂದ ಗಲಾಟೆ ನಡೆಯುವ ಬಗ್ಗೆ ಗುಪ್ತಚರ ಇಲಾಖೆ ಮೊದಲೇ ಎಚ್ಚರಿಕೆ ನೀಡಿತ್ತು. ಆದರೆ, ಸ್ಥಳೀಯ ಪೊಲೀಸರು ಆ ಬಗ್ಗೆ ತಲೆಕೆಡೆಸಿಕೊಂಡಿರಲಿಲ್ಲ ಎಂದು ಹೇಳಿದರು.