ಮುಲಾಜಿಲ್ಲದೆ ಬಂಧಿಸಿ ಎಂದ ಸಿಟಿ ರವಿ

ಪಾದರಾಯನಪುರದಲ್ಲಿ ವೈದ್ಯಕೀಯ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ದ ದೌರ್ಜನ್ಯ ನಡೆಸುವ ಪ್ರಯತ್ನ ಮಾಡಿದವರನ್ನು ಮುಲಾಜಿಲ್ಲದೆ ಬಂಧಿಸಿ ಕಠಿಣ‌‌ ಕ್ರಮ ಜರುಗಿಸಬೇಕು ಎಂದು  ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂತಹವರ ನಿಯಂತ್ರಿಸದಿದ್ದರೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ.‌ ಹೀಗಾಗಿ ಈ ರೀತಿ ಪುಂಡಾಟ ಮಾಡಿದವರನ್ನು ಕೂಡಲೇ  ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಗೃಹ ಸಚಿವರು ಇಂತಹವರನ್ನು ಮಟ್ಟ ಹಾಕಬೇಕು ಎಂದು ಒತ್ತಾಯ ಮಾಡಿದ್ದೇನೆ. ಇಂತ ಜನರಿಗೆ ಸಂಯಮದ ಪಾಠ ಅಗತ್ಯವಿಲ್ಲ. ಅವರಿಗೆ ಅರ್ಥವಾಗುವ ಭಾಷೆಯಲ್ಲಿ ಉತ್ತರ ನೀಡಬೇಕುಆಹಾರದಲ್ಲಿ ವ್ಯತ್ಯಯ ಆಗುತ್ತಿದ್ದು. ಇದರಿಂದ ಗಲಾಟೆ ನಡೆಯುವ ಬಗ್ಗೆ ಗುಪ್ತಚರ ಇಲಾಖೆ ಮೊದಲೇ ಎಚ್ಚರಿಕೆ ನೀಡಿತ್ತು. ಆದರೆ, ಸ್ಥಳೀಯ ಪೊಲೀಸರು ಆ ಬಗ್ಗೆ ತಲೆಕೆಡೆಸಿಕೊಂಡಿರಲಿಲ್ಲ ಎಂದು ಹೇಳಿದರು.

 

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಹಣಕಾಸು ಸಚಿವಾಲಯದಿಂದ ೩೬,೬೫೯ ಕೋಟಿ ಹಣ ಬಿಡುಗಡೆ

Mon Apr 20 , 2020
ಕೊರೊನಾವೈರಸ್ ರಾಷ್ಟ್ರವ್ಯಾಪಿ  ಲಾಕ್‌ಡೌನ್ ಹಿನ್ನಲೆಯಲ್ಲಿ ೧೬.೦೧ ಕೋಟಿ ಫಲಾನುಭವಿಗಳಿಗೆ ೩೬,೬೫೯ ಕೋಟಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.ಮಾ. ೨೪ ರಿಂದ ಏ.೧೭ರವರೆಗೆ ಪ್ರಧಾನ ಮಂತ್ರಿ ಕಿಸಾನ್, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ, ಮಾತೃ ವಂದನಾ ಯೋಜನೆ, ರಾಷ್ಟ್ರೀಯ ಆರೋಗ್ಯ ಮಿಷನ್‌ನಂತಹ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅವರ ಖಾತೆಗೆ ನೇರವಾಗಿ ಹಣ ವರ್ಗಾಯಿಸಲಾಗಿದೆ ಎಂದು ಸರ್ಕಾರ ಹೇಳಿದೆ.ರಾಜ್ಯ ಸರ್ಕಾರಗಳು ೧೮೦ ಕಲ್ಯಾಣ ಯೋಜನೆಗಳ ಮೂಲಕ ೯,೨೧೭ […]

Advertisement

Wordpress Social Share Plugin powered by Ultimatelysocial