ಮೈಸೂರನ್ನು ಕೊರೊನಾ ಮುಕ್ತ ಮಾಡುವುದು ನಮ್ಮ ಗುರಿ :ಎಸ್ ಟಿ ಸೋಮಶೇಖರ್

ಮೈಸೂರು ಹಾಗೂ ನಂಜನಗೂಡನ್ನು ಕೊರೊನಾ ಮುಕ್ತ ಮಾಡುವುದು ನಮ್ಮ ಗುರಿ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ವೈದ್ಯಕೀಯ ಸಿಬ್ಬಂದಿ ಅತ್ಯುತ್ತಮ ರೀತಿ ಕಾರ್ಯನಿರ್ವಹಿಸಿದ್ದಾರೆ. ಅಧಿಕಾರಿ ವರ್ಗದವರ ಸೇವೆಯೂ ಗಣನೀಯ. ನಂಜನಗೂಡು ಜನತೆ ಯಾವುದೇ ಕಾರಣಕ್ಕೂ ಭಯ ಬೀಳುವುದು ಬೇಡ. ನಾನು ಈ ಹಿಂದೆಯೇ ಹೇಳಿದಂತೆ ಈ ಕ್ಷೇತ್ರದ ಜನತೆಯ ಪರ ಸರ್ಕಾರ, ಜಿಲ್ಲಾಡಳಿತ ಇದ್ದು, ಸಹಾಯಕ್ಕೆ ಬದ್ಧರಾಗಿದ್ದೇವೆ. ಈಗಾಗಲೇ ನಂಜನಗೂಡು ಕ್ಷೇತ್ರದಲ್ಲಿ ಸೋಂಕಿತರ ಪ್ರಮಾಣ ಇಳಿಮುಖವಾಗುತ್ತಿದ್ದು, ಹೊಸ ಪ್ರಕರಣಗಳೂ ಪತ್ತೆಯಾಗುತ್ತಿಲ್ಲ ಎಂದು  ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಧೀರನ್ ಚೊಚ್ಚಲ ಸಿನಿಮಾದ ಪೋಸ್ಟರ್ ರಿಲೀಸ್

Wed Apr 29 , 2020
ಕನ್ನಡ ಚಿತ್ರರಂಗ ಎಂದಾಕ್ಷಣ ನೆನಪಿಗೆ ಬರುವುದೆ ಅಣ್ಣಾವ್ರು. ರಾಜಕುಮಾರ ಇಡೀ ಫ್ಯಾಮಿಲಿನೇ ಚಿತ್ರರಂಗಕ್ಕೆ ಕೊಡುಗೆ ನಿಡಿದ್ದಾರೆ. ಈಗ ಅಣ್ಣಾವ್ರ ಇನ್ನೊಬ್ಬ ಮೊಮ್ಮಗ ರಾಮ್‌ಕುಮಾರ್ ಧೀರನ್ ಕೂಡ ಸಿನಿಮಾ ಇಂಡಸ್ಟಿçಗೆ ಪಾದಾರ್ಪಣೆ ಮಾಡಿದ್ದಾರೆ. ರಾಮ್‌ಕುಮಾರ ಮಗ ಧೀರನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಚೊಚ್ಚಲ ಸಿನಿಮಾದ ಪೋಸ್ಟರ್ ಒಂದನ್ನು ರಿಲೀಸ್ ಮಾಡಿದ್ದಾರೆ. ತೆಲುಗಿನ ಆರ್.ಎಕ್ಸ್ ೧೦೦ ಸಿನಿಮಾ ಕನ್ನಡದಲ್ಲಿ ರಿಮೇಕ್ ಆಗ್ತಿದ್ದು, ಅದರಲ್ಲಿ ಧೀರನ್ ಹೀರೋ ಆಗಿ ಮಿಂಚಲಿದ್ದಾರೆ. ಈ ಚಿತ್ರಕ್ಕೆ ಶಿವ […]

Advertisement

Wordpress Social Share Plugin powered by Ultimatelysocial